ಬ್ರೇಕಿಂಗ್ ನ್ಯೂಸ್
06-03-21 11:09 am Mangalore Correspondent ಕ್ರೈಂ
ಬಂಟ್ವಾಳ, ಮಾ.6: ಹೆಂಡತಿಯೇ ಗಂಡನನ್ನು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಕೊಲೆ ಆರೋಪದಡಿ ಸೇಸಪ್ಪ ಅವರ ಪತ್ನಿ ಉಮಾವತಿ (52) ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಕೂಲಿ ಕೆಲಸ ಮಾಡುತ್ತಿದ್ದು ದಿನಾ ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಕುಡಿದು ಗಲಾಟೆ ನಡೆಯುತ್ತಿತ್ತು. ಇವರ ಮನೆಯಲ್ಲಿ ಮಾ.3 ರಂದು ರಾತ್ರಿ ಗಂಡ ಹೆಂಡತಿ ಮಧ್ಯೆ ಗಲಾಟೆ ನಡೆದಿತ್ತು. ಗಲಾಟೆ ಜೋರಾಗಿ ಹೊಡೆದಾಟದ ಹಂತಕ್ಕೆ ತಲುಪಿದ್ದು ಹೆಂಡತಿ ಮನೆಯಲ್ಲಿ ಇದ್ದ ಕತ್ತಿಯಿಂದ ಗಂಡನಿಗೆ ಹೊಡೆದಿದ್ದರು. ಇದರಿಂದ ಸೇಸಪ್ಪ ಅವರ ಬಲ ಹಣೆಗೆ ಗಾಯವಾಗಿದ್ದು ಮಗಳು ಇವರ ಜಗಳ ಬಿಡಿಸಿದ್ದಳು. ಬಳಿಕ ಗಾಯವಾಗಿ ರಕ್ತ ಬಂದರೂ ಚಿಕಿತ್ಸೆ ಪಡೆಯದೆ ಮನೆಯಲ್ಲಿಯೇ ಉಳಿದಿದ್ದರು. ರಕ್ತಸ್ರಾವ ಆಗಿದ್ದರಿಂದ ಹುಷಾರಿಲ್ಲ ಎಂದು ಮಲಗಿದ್ದಲ್ಲಿಯೇ ಇದ್ದು ಮಾ.5 ರಂದು ಸಂಜೆ ಅವರು ಮೃತಪಟ್ಟಿದ್ದಾರೆ.
ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ಉಮಾವತಿ ಅವರನ್ನು ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದಲ್ಲಿ ಬಂಟ್ಚಾಳ ಗ್ರಾಮಾಂತರ ಎಸ್ಐ ಪ್ರಸನ್ನ ಅವರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
The wife kills her husband in an angry mood and under the influence of liquor in Bantwal, Mangalore. The deceased has been identified as Sesappa Poojary (60).
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 07:58 pm
Mangalore Correspondent
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
19-10-25 01:26 pm
Bangalore Correspondent
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm