ಬ್ರೇಕಿಂಗ್ ನ್ಯೂಸ್
06-03-21 11:37 am Headline Karnataka News Network ಕ್ರೈಂ
ಚಿತ್ರದುರ್ಗ, ಮಾ.6 : ಅವರು ಅಂಚೆ ಇಲಾಖೆ ನೌಕರರು. ಗೆಳೆಯರ ಮನೆಯಲ್ಲಿ ಊಟ ಮುಗಿಸಿ ಮನೆ ಕಡೆ ಹೊರಟಿದ್ದರು. ಹೆದ್ದಾರಿ ಮಧ್ಯೆ ಟರ್ನ್ ಆಗುವಾಗ ಮಂಗಳಮುಖಿಯರ ಗುಂಪು ಎದುರಾಗಿತ್ತು. ಆ ಬಳಿಕ ಮನೆಗೆ ಹೊರಟವ್ರು ಸೇರಿದ್ದು ಜಿಲ್ಲಾಸ್ಪತ್ರೆಗೆ.
ಯೆಸ್.. ಚಿತ್ರದುರ್ಗದ ಅಂಚೆ ಇಲಾಖೆ ನೌಕರರಾದ ಅನಿಲ್ ಮತ್ತು ಶಂಭುಲಿಂಗಪ್ಪ. ಗುರುವಾರ ಸಂಜೆ ವೇಳೆಗೆ ಚಿತ್ರದುರ್ಗ ತಾಲೂಕಿನ ಯಳಗೋಡು ಗ್ರಾಮದ ಗೆಳೆಯನ ಮನೆಗೆ ಊಟಕ್ಕೆ ಹೋಗಿ ವಾಪಸ್ ಆಗ್ತಿದ್ರು. ಈ ವೇಳೆ ಕಾತ್ರಾಳ್ ಕೆರೆಯ ಬಳಿ ಎದುರಾದ ಮಂಗಳಮುಖಿಯರ ಗುಂಪು ಬೈಕ್ಗೆ ಸೈಡ್ ನೀಡಿದಂತೆ ನಟಿಸಿ ದಿಢೀರ್ ಅಡ್ಡ ಬಂದಿದೆ. ಬಳಿಕ ಬೈಕಿನಲ್ಲಿದ್ದ ಇಬ್ಬರನ್ನು ಕೆಳಗೆ ಬೀಳಿಸಿ ಚಪ್ಪಲಿ, ಕಲ್ಲು ಸೇರಿದಂತೆ ಕೈಗೆ ಸಿಕ್ಕದ್ದನ್ನು ತೆಗೆದುಕೊಂಡು ಭೀಕರವಾಗಿ ಹಲ್ಲೆ ನಡೆಸಿದೆ. ಕೊರಳಲ್ಲಿದ್ದ ಚೈನು, ಉಂಗುರು, ಹಣ ಕಸಿದುಕೊಂಡಿದೆ. ಅಷ್ಟರಲ್ಲೇ ಸಮೀಪದ ಡಾಬಾದಲ್ಲಿದ್ದ ಹುಡುಗರು ಸ್ಥಳಕ್ಕೆ ಬರ್ತ್ತಿದ್ದಂತೆ ಆಟೋ ಹತ್ತಿ ಮಂಗಳಮುಖಿಯರ ಗ್ಯಾಂಗ್ ಎಸ್ಕೇಪ್ ಆಗಿದೆಯಂತೆ.

ಮಾರಣಾಂತಿಕವಾಗಿ ಹಲ್ಲೆಗೊಳಗಾಗಿರುವ ಅಂಚೆ ಇಲಾಖೆ ನೌಕರರು ಇಗ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೀತ್ತಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಗಾಯಾಳುಗಳಿಬ್ಬರೂ ಒಳ್ಳೆಯ ನಡತೆಯುಳ್ಳವರು ಅನ್ನೋದು ಸ್ಥಳೀಯರ ಅಭಿಪ್ರಾಯ. ಆದ್ರೆ ಇಂಥವರ ಮೇಲೆ ಮಂಗಳಮುಖಿಯರು ವಿನಾಕಾರಣ ಹಲ್ಲೆ ಮಾಡಿದ್ದಲ್ದೆ, ಬೆಲೆಬಾಳುವ ವಸ್ತುಗಳನ್ನ ಕದ್ದೊಯ್ದ ಆರೋಪವೂ ಕೇಳಿಬಂದಿದೆ. ಹೀಗೆ ಕೆಲವು ಮಂಗಳಮುಖಿಯರ ಕಾಟದಿಂದಾಗಿ ಹೈವೇಗಳಲ್ಲಿ ಭಯದಲ್ಲೇ ಓಡಾಡುವಂತಾಗಿದೆ ಅನ್ನೋದು ಸ್ಥಳೀಯರ ಆರೋಪ.
ಒಟ್ಟಾರೆ ಕೋಟೆನಾಡು ಚಿತ್ರದುರ್ಗ ನಗರದ ಹೈವೇಗಳಲ್ಲಿ ಮಂಗಳಮುಖಿಯರ ಹಾವಳಿ ಹೆಚ್ಚಾಗುತ್ತಿದೆ. ದುಡ್ಡಿಗೆ ಪೀಡಿಸುತ್ತಿದ್ದವರು ಈಗ ರೌಡಿಸಂಗೆ ಇಳಿದಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು ಈಗಲಾದ್ರು ಎಚ್ಚೆತ್ತುಕೊಂಡು, ಸತ್ಯಾಸತ್ಯತೆ ಪರಿಶೀಲಿಸಬೇಕಿದೆ. ಹೈವೇಗಳಲ್ಲಿ ಓಡಾಡುವ ಸವಾರರಿಗೆ ರಕ್ಷಣೆ ಒದಗಿಸಬೇಕಿದೆ.
Two youths have been hospitalized after a gang of Eunuchs attacked two youths brutally for robbery in Chitradurga.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm