ಬ್ರೇಕಿಂಗ್ ನ್ಯೂಸ್
06-03-21 11:37 am Headline Karnataka News Network ಕ್ರೈಂ
ಚಿತ್ರದುರ್ಗ, ಮಾ.6 : ಅವರು ಅಂಚೆ ಇಲಾಖೆ ನೌಕರರು. ಗೆಳೆಯರ ಮನೆಯಲ್ಲಿ ಊಟ ಮುಗಿಸಿ ಮನೆ ಕಡೆ ಹೊರಟಿದ್ದರು. ಹೆದ್ದಾರಿ ಮಧ್ಯೆ ಟರ್ನ್ ಆಗುವಾಗ ಮಂಗಳಮುಖಿಯರ ಗುಂಪು ಎದುರಾಗಿತ್ತು. ಆ ಬಳಿಕ ಮನೆಗೆ ಹೊರಟವ್ರು ಸೇರಿದ್ದು ಜಿಲ್ಲಾಸ್ಪತ್ರೆಗೆ.
ಯೆಸ್.. ಚಿತ್ರದುರ್ಗದ ಅಂಚೆ ಇಲಾಖೆ ನೌಕರರಾದ ಅನಿಲ್ ಮತ್ತು ಶಂಭುಲಿಂಗಪ್ಪ. ಗುರುವಾರ ಸಂಜೆ ವೇಳೆಗೆ ಚಿತ್ರದುರ್ಗ ತಾಲೂಕಿನ ಯಳಗೋಡು ಗ್ರಾಮದ ಗೆಳೆಯನ ಮನೆಗೆ ಊಟಕ್ಕೆ ಹೋಗಿ ವಾಪಸ್ ಆಗ್ತಿದ್ರು. ಈ ವೇಳೆ ಕಾತ್ರಾಳ್ ಕೆರೆಯ ಬಳಿ ಎದುರಾದ ಮಂಗಳಮುಖಿಯರ ಗುಂಪು ಬೈಕ್ಗೆ ಸೈಡ್ ನೀಡಿದಂತೆ ನಟಿಸಿ ದಿಢೀರ್ ಅಡ್ಡ ಬಂದಿದೆ. ಬಳಿಕ ಬೈಕಿನಲ್ಲಿದ್ದ ಇಬ್ಬರನ್ನು ಕೆಳಗೆ ಬೀಳಿಸಿ ಚಪ್ಪಲಿ, ಕಲ್ಲು ಸೇರಿದಂತೆ ಕೈಗೆ ಸಿಕ್ಕದ್ದನ್ನು ತೆಗೆದುಕೊಂಡು ಭೀಕರವಾಗಿ ಹಲ್ಲೆ ನಡೆಸಿದೆ. ಕೊರಳಲ್ಲಿದ್ದ ಚೈನು, ಉಂಗುರು, ಹಣ ಕಸಿದುಕೊಂಡಿದೆ. ಅಷ್ಟರಲ್ಲೇ ಸಮೀಪದ ಡಾಬಾದಲ್ಲಿದ್ದ ಹುಡುಗರು ಸ್ಥಳಕ್ಕೆ ಬರ್ತ್ತಿದ್ದಂತೆ ಆಟೋ ಹತ್ತಿ ಮಂಗಳಮುಖಿಯರ ಗ್ಯಾಂಗ್ ಎಸ್ಕೇಪ್ ಆಗಿದೆಯಂತೆ.

ಮಾರಣಾಂತಿಕವಾಗಿ ಹಲ್ಲೆಗೊಳಗಾಗಿರುವ ಅಂಚೆ ಇಲಾಖೆ ನೌಕರರು ಇಗ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೀತ್ತಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಗಾಯಾಳುಗಳಿಬ್ಬರೂ ಒಳ್ಳೆಯ ನಡತೆಯುಳ್ಳವರು ಅನ್ನೋದು ಸ್ಥಳೀಯರ ಅಭಿಪ್ರಾಯ. ಆದ್ರೆ ಇಂಥವರ ಮೇಲೆ ಮಂಗಳಮುಖಿಯರು ವಿನಾಕಾರಣ ಹಲ್ಲೆ ಮಾಡಿದ್ದಲ್ದೆ, ಬೆಲೆಬಾಳುವ ವಸ್ತುಗಳನ್ನ ಕದ್ದೊಯ್ದ ಆರೋಪವೂ ಕೇಳಿಬಂದಿದೆ. ಹೀಗೆ ಕೆಲವು ಮಂಗಳಮುಖಿಯರ ಕಾಟದಿಂದಾಗಿ ಹೈವೇಗಳಲ್ಲಿ ಭಯದಲ್ಲೇ ಓಡಾಡುವಂತಾಗಿದೆ ಅನ್ನೋದು ಸ್ಥಳೀಯರ ಆರೋಪ.
ಒಟ್ಟಾರೆ ಕೋಟೆನಾಡು ಚಿತ್ರದುರ್ಗ ನಗರದ ಹೈವೇಗಳಲ್ಲಿ ಮಂಗಳಮುಖಿಯರ ಹಾವಳಿ ಹೆಚ್ಚಾಗುತ್ತಿದೆ. ದುಡ್ಡಿಗೆ ಪೀಡಿಸುತ್ತಿದ್ದವರು ಈಗ ರೌಡಿಸಂಗೆ ಇಳಿದಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು ಈಗಲಾದ್ರು ಎಚ್ಚೆತ್ತುಕೊಂಡು, ಸತ್ಯಾಸತ್ಯತೆ ಪರಿಶೀಲಿಸಬೇಕಿದೆ. ಹೈವೇಗಳಲ್ಲಿ ಓಡಾಡುವ ಸವಾರರಿಗೆ ರಕ್ಷಣೆ ಒದಗಿಸಬೇಕಿದೆ.
Two youths have been hospitalized after a gang of Eunuchs attacked two youths brutally for robbery in Chitradurga.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am