ಬ್ರೇಕಿಂಗ್ ನ್ಯೂಸ್
06-03-21 10:36 pm Headline Karnataka News Network ಕ್ರೈಂ
ಮೈಸೂರು, ಮಾ 6: ಮೈಸೂರು ನಗರದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬ ಪತ್ನಿಗೆ ವಂಚಿಸಿ ಮತ್ತೊಂದು ಹುಡುಗಿಯನ್ನು ಮದುವೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಮಹಿಳಾ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ ಲಷ್ಕರ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿರುವ ಸಮೀವುಲ್ಲಾ, 2017 ರಲ್ಲಿ ಎಚ್.ಡಿ ಕೋಟೆಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿಯನ್ನು ಮದುವೆಯಾಗಿದ್ದ. ಮದುವೆ ಸಮಯದಲ್ಲಿ ವರದಕ್ಷಿಣೆಯಾಗಿ ಬೈಕ್ ಹಾಗೂ ಚಿನ್ನಾಭರಣ ಪಡೆದುಕೊಂಡಿದ್ದ.
ಆರು ತಿಂಗಳು ಪತ್ನಿಯೊಂದಿಗೆ ಅನ್ಯೋನ್ಯವಾಗಿ ಸಂಸಾರ ನಡೆಸಿದ್ದ ಸಮೀವುಲ್ಲಾ, ದಿನ ಕಳೆದಂತೆ ಕ್ಷುಲ್ಲಕ ಕಾರಣಗಳಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ವರ್ಷದ ನಂತರ ಗಂಡ ಸಮೀವುಲ್ಲಾ ಹಾಗೂ ಮನೆಯವರು ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಗೆ ನಿರಂತರ ಕಿರುಕುಳ ನೀಡುತ್ತಿದ್ದರು ಮತ್ತು ಆಕೆಯ ಬಳಿಯಿದ್ದ ಚಿನ್ನಾಭರಣ ಕಸಿದುಕೊಂಡಿದ್ದರು ಎನ್ನಲಾಗಿದೆ.
ಇತ್ತೀಚಿಗೆ ಪತ್ನಿಯನ್ನು ತವರು ಮನೆಗೆ ಕಳುಹಿಸಿದ ಸಮೀವುಲ್ಲಾ, ಇನ್ನೊಂದು ಹುಡುಗಿ ಜೊತೆ ಮದುವೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆಗೊಳಗಾದ ಮಹಿಳೆಯು ಪತಿ ಸಮೀವುಲ್ಲಾ ಹಾಗೂ ಆತನ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದಾಳೆ. ಈ ನಡುವೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಆಗಿ ಮೂರು ದಿನ ಕಳೆದರೂ, ಆರೋಪಿ ಸಮೀವುಲ್ಲಾನ ವಿರುದ್ಧ ಪೊಲೀಸ್ ಇಲಾಖೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಮೀವುಲ್ಲಾನ ಪತ್ನಿ ಆರೋಪಿಸಿದ್ದಾರೆ.
Police constable of Lashkar Police station Samiwulla has been accused of Second Marriage and Torture by first wife.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm