ಬ್ರೇಕಿಂಗ್ ನ್ಯೂಸ್
06-03-21 10:36 pm Headline Karnataka News Network ಕ್ರೈಂ
ಮೈಸೂರು, ಮಾ 6: ಮೈಸೂರು ನಗರದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬ ಪತ್ನಿಗೆ ವಂಚಿಸಿ ಮತ್ತೊಂದು ಹುಡುಗಿಯನ್ನು ಮದುವೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಮಹಿಳಾ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ ಲಷ್ಕರ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿರುವ ಸಮೀವುಲ್ಲಾ, 2017 ರಲ್ಲಿ ಎಚ್.ಡಿ ಕೋಟೆಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿಯನ್ನು ಮದುವೆಯಾಗಿದ್ದ. ಮದುವೆ ಸಮಯದಲ್ಲಿ ವರದಕ್ಷಿಣೆಯಾಗಿ ಬೈಕ್ ಹಾಗೂ ಚಿನ್ನಾಭರಣ ಪಡೆದುಕೊಂಡಿದ್ದ.
ಆರು ತಿಂಗಳು ಪತ್ನಿಯೊಂದಿಗೆ ಅನ್ಯೋನ್ಯವಾಗಿ ಸಂಸಾರ ನಡೆಸಿದ್ದ ಸಮೀವುಲ್ಲಾ, ದಿನ ಕಳೆದಂತೆ ಕ್ಷುಲ್ಲಕ ಕಾರಣಗಳಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ವರ್ಷದ ನಂತರ ಗಂಡ ಸಮೀವುಲ್ಲಾ ಹಾಗೂ ಮನೆಯವರು ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಗೆ ನಿರಂತರ ಕಿರುಕುಳ ನೀಡುತ್ತಿದ್ದರು ಮತ್ತು ಆಕೆಯ ಬಳಿಯಿದ್ದ ಚಿನ್ನಾಭರಣ ಕಸಿದುಕೊಂಡಿದ್ದರು ಎನ್ನಲಾಗಿದೆ.
ಇತ್ತೀಚಿಗೆ ಪತ್ನಿಯನ್ನು ತವರು ಮನೆಗೆ ಕಳುಹಿಸಿದ ಸಮೀವುಲ್ಲಾ, ಇನ್ನೊಂದು ಹುಡುಗಿ ಜೊತೆ ಮದುವೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆಗೊಳಗಾದ ಮಹಿಳೆಯು ಪತಿ ಸಮೀವುಲ್ಲಾ ಹಾಗೂ ಆತನ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದಾಳೆ. ಈ ನಡುವೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಆಗಿ ಮೂರು ದಿನ ಕಳೆದರೂ, ಆರೋಪಿ ಸಮೀವುಲ್ಲಾನ ವಿರುದ್ಧ ಪೊಲೀಸ್ ಇಲಾಖೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಮೀವುಲ್ಲಾನ ಪತ್ನಿ ಆರೋಪಿಸಿದ್ದಾರೆ.
Police constable of Lashkar Police station Samiwulla has been accused of Second Marriage and Torture by first wife.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am