ಬ್ರೇಕಿಂಗ್ ನ್ಯೂಸ್
06-03-21 10:36 pm Headline Karnataka News Network ಕ್ರೈಂ
ಮೈಸೂರು, ಮಾ 6: ಮೈಸೂರು ನಗರದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬ ಪತ್ನಿಗೆ ವಂಚಿಸಿ ಮತ್ತೊಂದು ಹುಡುಗಿಯನ್ನು ಮದುವೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಮಹಿಳಾ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ ಲಷ್ಕರ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿರುವ ಸಮೀವುಲ್ಲಾ, 2017 ರಲ್ಲಿ ಎಚ್.ಡಿ ಕೋಟೆಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿಯನ್ನು ಮದುವೆಯಾಗಿದ್ದ. ಮದುವೆ ಸಮಯದಲ್ಲಿ ವರದಕ್ಷಿಣೆಯಾಗಿ ಬೈಕ್ ಹಾಗೂ ಚಿನ್ನಾಭರಣ ಪಡೆದುಕೊಂಡಿದ್ದ.
ಆರು ತಿಂಗಳು ಪತ್ನಿಯೊಂದಿಗೆ ಅನ್ಯೋನ್ಯವಾಗಿ ಸಂಸಾರ ನಡೆಸಿದ್ದ ಸಮೀವುಲ್ಲಾ, ದಿನ ಕಳೆದಂತೆ ಕ್ಷುಲ್ಲಕ ಕಾರಣಗಳಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ವರ್ಷದ ನಂತರ ಗಂಡ ಸಮೀವುಲ್ಲಾ ಹಾಗೂ ಮನೆಯವರು ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಗೆ ನಿರಂತರ ಕಿರುಕುಳ ನೀಡುತ್ತಿದ್ದರು ಮತ್ತು ಆಕೆಯ ಬಳಿಯಿದ್ದ ಚಿನ್ನಾಭರಣ ಕಸಿದುಕೊಂಡಿದ್ದರು ಎನ್ನಲಾಗಿದೆ.
ಇತ್ತೀಚಿಗೆ ಪತ್ನಿಯನ್ನು ತವರು ಮನೆಗೆ ಕಳುಹಿಸಿದ ಸಮೀವುಲ್ಲಾ, ಇನ್ನೊಂದು ಹುಡುಗಿ ಜೊತೆ ಮದುವೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆಗೊಳಗಾದ ಮಹಿಳೆಯು ಪತಿ ಸಮೀವುಲ್ಲಾ ಹಾಗೂ ಆತನ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದಾಳೆ. ಈ ನಡುವೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಆಗಿ ಮೂರು ದಿನ ಕಳೆದರೂ, ಆರೋಪಿ ಸಮೀವುಲ್ಲಾನ ವಿರುದ್ಧ ಪೊಲೀಸ್ ಇಲಾಖೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಮೀವುಲ್ಲಾನ ಪತ್ನಿ ಆರೋಪಿಸಿದ್ದಾರೆ.
Police constable of Lashkar Police station Samiwulla has been accused of Second Marriage and Torture by first wife.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm