ಬ್ರೇಕಿಂಗ್ ನ್ಯೂಸ್
08-03-21 11:42 am Headline Karnataka News Network ಕ್ರೈಂ
ಬೆಳಗಾವಿ, ಮಾ 8: ನಿಯಮ ಉಲ್ಲಂಘಿಸಿ ಸಾಗಿಸುತ್ತಿದ್ದ ಬರೋಬ್ಬರಿ 6.675 ಟನ್ ಜಿಲೆಟಿನ್ ಕಡ್ಡಿ, ಡಿಟೋನೇಟರ್ಗಳನ್ನು ಜಿಲ್ಲೆಯ ಹೊನಗಾ ಗ್ರಾಮದ ಬಳಿ ಪೊಲೀಸರು ಜಪ್ತಿಪಡಿಸಿಕೊಂಡಿದ್ದಾರೆ.
ಎರಡು ವಾಹನಗಳಲ್ಲಿ ಸ್ಫೋಟಕ ಸಾಗಿಸುತ್ತಿದ್ದ ಚಿಕ್ಕೋಡಿ ತಾಲೂಕಿನ ಬೊಬಲವಾಡದ ರಮೇಶ್ ಲಕ್ಕೋಟಿ, ರಾಜು ಶಿರಗಾವಿ, ಮುಗಳಿ ನಿವಾಸಿ ಅರುಣಮಠದ, ವಿನಯ್ ಅವರುಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರೋಶಿ ಗ್ರಾಮದಿಂದ ಧಾರವಾಡ, ಗದಗ ಕಡೆ ಸ್ಫೋಟಕಗಳನ್ನು ಈ ನಾಲ್ವರು ಸಾಗಿಸುತ್ತಿದ್ದು, ಸ್ಫೋಟಕಗಳ ಮೌಲ್ಯ ನಾಲ್ಕು ಲಕ್ಷ ಎಂದು ಅಂದಾಜಿಸಲಾಗಿದೆ.
ಟಾಟಾ ಕ್ಯಾಂಟರ್, ಬೊಲೆರೊ ಪಿಕ್ಅಪ್ ವಾಹನಗಳಲ್ಲಿ ಇಷ್ಟು ಪ್ರಮಾಣದ ಸ್ಫೋಟಕಗಳನ್ನು ಬಂಧಿತರು ಸಾಗಿಸುತ್ತಿದ್ದರು. ನಿಯಮ ಉಲ್ಲಂಘಿಸಿ ನಿರ್ಲಕ್ಷ್ಯದಿಂದ ಸ್ಫೋಟಕ ಸಾಗಿಸುತ್ತಿರುವ ಮಾಹಿತಿಯ ಆಧಾರದ ಮೇಲೆ ಕಾಕತಿ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮ ಬ್ಲಾಸ್ಟಿಂಗ್ ನಡೆದಿತ್ತು. ಹಾಗೂ ಟಾಟಾ ಏಸ್ ವಾಹನ ಚಾಲಕ ರಿಯಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆರೋಗ್ಯ ಸಚಿವ ಸುಧಾಕರ್ ತವರು ಕ್ಷೇತ್ರದಲ್ಲಿ ಇಂತಹದೊಂದು ದುರಂತ ಸಂಭವಿಸಿತ್ತು. ಹಾಗೂ ಸ್ಫೋಟದ ತೀವ್ರತೆಗೆ ಹತ್ತಾರು ಕಿ.ಮೀ ವರೆಗೂ ಭೂಮಿ ಕಂಪಿಸಿತ್ತು.
ಚಿಕ್ಕಬಳ್ಳಾಪುರ ಘಟನೆಗೂ ಮುನ್ನ ಶಿವಮೊಗ್ಗದ ಹುಣಸೋಡು ಬಳಿಯಿರುವ ರೈಲ್ವೆ ಕ್ವಾರಿಯತ್ತ ತೆರಳುತ್ತಿತ್ತು. ಇನ್ನೇನು ಕ್ವಾರಿ ರೀಚ್ ಆಗ್ಬೇಕಿತ್ತು..ಆದರೆ ಲಾರಿಯಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳಲ್ಲಿ, ಬಹುತೇಕ ಜಿಲ್ಲೆಟಿನ್ ಕಡ್ಡಿಗಳು ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಲಾರಿ ಛಿದ್ರ ಛಿದ್ರವಾಗಿದ್ರೆ, ಲಾರಿಯಲ್ಲಿದ್ದ ಬಿಹಾರ ಮೂಲದ 8ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಲಾರಿ ಚಾಲಕ, ಕಾರ್ಮಿಕರು ಸೇರಿದಂತೆ 8ಕ್ಕೂ ಹೆಚ್ಚು ಕಾರ್ಮಿಕರ ಮೃತದೇಹವೂ ಒಂದೊಂದು ದಿಕ್ಕಿನಲ್ಲಿ ಛಿದ್ರ ಛಿದ್ರವಾಗಿ ಬಿದ್ದಿದ್ದವು. ಸ್ಫೋಟದ ತೀವ್ರತೆ ಹೇಗಿತ್ತು ಅಂದ್ರೆ, ದುರಂತದಲ್ಲಿ ಮೃತಪಟ್ಟಿರೋ ಅದೆಷ್ಟೋ ಕಾರ್ಮಿಕರ ಮೃತದೇಹ ಗುರುತೇ ಸಿಗದಷ್ಟು ಛಿದ್ರ ಛಿದ್ರವಾಗಿದ್ದವು.
ಹೀಗೆ ಶಿವಮೊಗ್ಗ, ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ದುರ್ಘಟನೆಗಳು ಮಾಸುವ ಮುನ್ನವೇ ಬೆಳಗಾವಿಯಲ್ಲಿ ದೊರೆತ ಜಿಲೆಟಿನ್ ಕಡ್ಡಿಗಳು ಆತಂಕ ಮೂಡಿಸಿವೆ.
Belagavi police have arrested four persons for transporting 6 tons of large gelatin explosives illegally.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm