ಬ್ರೇಕಿಂಗ್ ನ್ಯೂಸ್
08-03-21 01:45 pm Mangaluru Correspondent ಕ್ರೈಂ
ಕೊಣಾಜೆ, ಮಾ.8: ಹಿಂದು ಸಂಘಟನೆಯ ಸೋಗಿನಲ್ಲಿದ್ದ ಕಳ್ಳನೊಬ್ಬನನ್ನು ಮೊಂಟೆಪದವಿನ ನಾಗರಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೊಂಟೆಪದವು ಪರಿಸರದಲ್ಲಿ ಹಲವು ಮನೆಗಳಿಂದ ಕಳ್ಳತನಗೈದ ಆರೋಪ ಹೊತ್ತಿರುವ ಹಿಂದು ಸಂಘಟನೆಯ ಕಾರ್ಯಕರ್ತನಾಗಿದ್ದ ತಾರನಾಥ ಯಾನೆ ಮೋಹನ ಬಂಧಿತ ಆರೋಪಿ.
ತಾರನಾಥ ಹಲವು ಮನೆಗಳಿಂದ ಚಿನ್ನಾಭರಣ, ಅಡಕೆ ಮೂಟೆ, ತನ್ನ ಮಿತ್ರರ ವಾಹನಗಳಿಂದಲೇ ಪೆಟ್ರೋಲ್ ಕದ್ದು ಯಾರಿಗೂ ಸಂಶಯ ಬಾರದಂತೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.


ಶನಿವಾರ ಮೊಂಟೆಪದವಿನ ಮನೆಯೊಂದರ ಅಂಗಳದಲ್ಲಿದ್ದ ಸ್ಕೂಟರ್ ಕದ್ದು ಪರಾರಿಯಾಗಿದ್ದು ಮನೆ ಮಂದಿ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಹಲವು ಮಂದಿಯ ಜೊತೆ ಚರ್ಚಿಸಿದಾಗ ಆರೋಪಿ ತಾರನಾಥ ಎಂಬುದನ್ನು ಖಚಿತಪಡಿಸಿಕೊಂಡು ಭಾನುವಾರ ರಾತ್ರಿ ಆತನ ಮನೆಗೆ ಹೋದಾಗ ಪರಾರಿಯಾಗಲು ಯತ್ನಿಸಿದ್ದಾನೆ. ಬೆನ್ನಟ್ಟಿದ್ದ ಸಾರ್ವಜನಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬಂಧಿತ ಆರೋಪಿ ಈ ಹಿಂದೆ ಗಂಗರಮಜಲು ಪರಿಸರದ ಬಡ ಕುಟುಂಬದ ಮನೆಯಿಂದ ಕಳ್ಳತನಕ್ಕೆ ಯತ್ನಿಸಿದ್ದಾಗ ಮನೆ ಮಂದಿ ಎಚ್ಚರಗೊಂಡಿದ್ದ ವೇಳೆ ತಾನು ಬಂದಿದ್ದ ಸ್ಕೂಟರ್ ಬಿಟ್ಟು ಪರಾರಿಯಾಗಿದ್ದ. ಪೊಲೀಸರಿಗೆ ಹೆದರಿ ಖುದ್ದು ಠಾಣೆಗೆ ಹಾಜರಾದ ಆತನನ್ನು ಕೊಣಾಜೆ ಪೊಲೀಸರು ಮುಚ್ಚಳಿಕೆ ಬರೆಸಿ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದರು. ಕಳ್ಳತನ ಆರೋಪಕ್ಕೆ ಗುರಿಯಾದ ಹಿನ್ನೆಲೆಯಲ್ಲಿ ತಾರನಾಥನನ್ನು ಹಿಂದು ಸಂಘಟನೆಯ ಮುಖಂಡರು ಸಂಘಟನೆಯಿಂದ ಉಚ್ಛಾಟಿಸಿದ್ದರು. ಆ ಬಳಿಕ ಸುಮಾರು ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ತಾರನಾಥ ತನ್ನ ಕೃತ್ಯ ಮತ್ತೆ ಮುಂದುವರಿಸಿದ್ದು ಶನಿವಾರ ಸ್ಕೂಟರ್ ಕದ್ದಿದ್ದು, ಸಾರ್ವಜನಿಕರು ಭಾನುವಾರ ರಾತ್ರಿ ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hindu organisation member arrested for constant stealing and robbery in Konaje region in Mangalore. The arrested has been identified as Tarnath.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am