ಬ್ರೇಕಿಂಗ್ ನ್ಯೂಸ್
08-03-21 01:45 pm Mangaluru Correspondent ಕ್ರೈಂ
ಕೊಣಾಜೆ, ಮಾ.8: ಹಿಂದು ಸಂಘಟನೆಯ ಸೋಗಿನಲ್ಲಿದ್ದ ಕಳ್ಳನೊಬ್ಬನನ್ನು ಮೊಂಟೆಪದವಿನ ನಾಗರಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೊಂಟೆಪದವು ಪರಿಸರದಲ್ಲಿ ಹಲವು ಮನೆಗಳಿಂದ ಕಳ್ಳತನಗೈದ ಆರೋಪ ಹೊತ್ತಿರುವ ಹಿಂದು ಸಂಘಟನೆಯ ಕಾರ್ಯಕರ್ತನಾಗಿದ್ದ ತಾರನಾಥ ಯಾನೆ ಮೋಹನ ಬಂಧಿತ ಆರೋಪಿ.
ತಾರನಾಥ ಹಲವು ಮನೆಗಳಿಂದ ಚಿನ್ನಾಭರಣ, ಅಡಕೆ ಮೂಟೆ, ತನ್ನ ಮಿತ್ರರ ವಾಹನಗಳಿಂದಲೇ ಪೆಟ್ರೋಲ್ ಕದ್ದು ಯಾರಿಗೂ ಸಂಶಯ ಬಾರದಂತೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.


ಶನಿವಾರ ಮೊಂಟೆಪದವಿನ ಮನೆಯೊಂದರ ಅಂಗಳದಲ್ಲಿದ್ದ ಸ್ಕೂಟರ್ ಕದ್ದು ಪರಾರಿಯಾಗಿದ್ದು ಮನೆ ಮಂದಿ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಹಲವು ಮಂದಿಯ ಜೊತೆ ಚರ್ಚಿಸಿದಾಗ ಆರೋಪಿ ತಾರನಾಥ ಎಂಬುದನ್ನು ಖಚಿತಪಡಿಸಿಕೊಂಡು ಭಾನುವಾರ ರಾತ್ರಿ ಆತನ ಮನೆಗೆ ಹೋದಾಗ ಪರಾರಿಯಾಗಲು ಯತ್ನಿಸಿದ್ದಾನೆ. ಬೆನ್ನಟ್ಟಿದ್ದ ಸಾರ್ವಜನಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬಂಧಿತ ಆರೋಪಿ ಈ ಹಿಂದೆ ಗಂಗರಮಜಲು ಪರಿಸರದ ಬಡ ಕುಟುಂಬದ ಮನೆಯಿಂದ ಕಳ್ಳತನಕ್ಕೆ ಯತ್ನಿಸಿದ್ದಾಗ ಮನೆ ಮಂದಿ ಎಚ್ಚರಗೊಂಡಿದ್ದ ವೇಳೆ ತಾನು ಬಂದಿದ್ದ ಸ್ಕೂಟರ್ ಬಿಟ್ಟು ಪರಾರಿಯಾಗಿದ್ದ. ಪೊಲೀಸರಿಗೆ ಹೆದರಿ ಖುದ್ದು ಠಾಣೆಗೆ ಹಾಜರಾದ ಆತನನ್ನು ಕೊಣಾಜೆ ಪೊಲೀಸರು ಮುಚ್ಚಳಿಕೆ ಬರೆಸಿ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದರು. ಕಳ್ಳತನ ಆರೋಪಕ್ಕೆ ಗುರಿಯಾದ ಹಿನ್ನೆಲೆಯಲ್ಲಿ ತಾರನಾಥನನ್ನು ಹಿಂದು ಸಂಘಟನೆಯ ಮುಖಂಡರು ಸಂಘಟನೆಯಿಂದ ಉಚ್ಛಾಟಿಸಿದ್ದರು. ಆ ಬಳಿಕ ಸುಮಾರು ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ತಾರನಾಥ ತನ್ನ ಕೃತ್ಯ ಮತ್ತೆ ಮುಂದುವರಿಸಿದ್ದು ಶನಿವಾರ ಸ್ಕೂಟರ್ ಕದ್ದಿದ್ದು, ಸಾರ್ವಜನಿಕರು ಭಾನುವಾರ ರಾತ್ರಿ ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hindu organisation member arrested for constant stealing and robbery in Konaje region in Mangalore. The arrested has been identified as Tarnath.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm