ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ; ಆರೋಪಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು

09-03-21 04:55 pm       Mangalore Correspondent   ಕ್ರೈಂ

ಬಸ್ಸಿನಲ್ಲಿ ವೈದ್ಯ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪ್ರಯಾಣಿಕರೇ ಸೇರಿ ರೆಡ್ ಹ್ಯಾಂಡ್ ಆಗಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪುತ್ತೂರು, ಮಾ.9 : ಬಸ್ಸಿನಲ್ಲಿ ವೈದ್ಯ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪ್ರಯಾಣಿಕರೇ ಸೇರಿ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಲ್ಲಿನ ಗಡಿಪ್ಪಿಲ ಎಂಬಲ್ಲಿ ನಡೆದಿದೆ. 

ಆರೋಪಿಯನ್ನು ಪುತ್ತೂರಿನ ಬಸ್ ನಿಲ್ದಾಣದ ಬಳಿ ಅಂಗಡಿ ಹೊಂದಿರುವ ಬೆಟ್ಟಂಪಾಡಿ ನಿವಾಸಿ ನೌಫಲ್ ಎಂದು ಗುರುತಿಸಲಾಗಿದೆ. ಮಾ.8ರಂದು ಸಂಜೆ ಸವಣೂರು ಮೂಲಕ ಕಡಬಕ್ಕೆ ಹೋಗುತ್ತಿದ್ದ ಬಸ್​ ಏರಿದ್ದ ನೌಫಾಲ್, ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗ್ತಿದೆ. ಈ ವಿಷಯ ತಿಳಿದು ಸಂಘಟನೆಯೊಂದರ ಕಾರ್ಯಕರ್ತರು ಬಸ್ಸನ್ನು ಗಡಿಪ್ಪಿಲದಲ್ಲಿ ತಡೆದು ನಿಲ್ಲಿಸಿ, ಆರೋಪಿಯನ್ನು ವಿಚಾರಿಸಿದ್ದಾರೆ. ಸ್ಥಳಕ್ಕೆ ಪುತ್ತೂರು ಪೊಲೀಸರನ್ನು ಕರೆಸಿದ್ದು ಅವರ ವಶಕ್ಕೆ ನೀಡಿದ್ದಾರೆ.

ಆರೋಪಿಯನ್ನು ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಯುವತಿ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

The public thrash man and surrender him to police for sexually harrasing a girl in the bus in Puttur.