ಬ್ರೇಕಿಂಗ್ ನ್ಯೂಸ್
11-03-21 12:04 pm Mangalore Correspondent ಕ್ರೈಂ
ಮಂಗಳೂರು, ಮಾ.11: ಮಂಗಳೂರು ಏರ್ಪೋರ್ಟಿನಲ್ಲಿ ಸರದಿಯಂತೆ, ಚಿನ್ನ ಕಳ್ಳಸಾಗಣೆ ಪತ್ತೆಯಾಗುತ್ತಿದೆ. ಈಗ ಮಹಿಳೆಯರು ಕೂಡ ಕಳ್ಳ ಸಾಗಣೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕೇರಳದ ಕಾಸರಗೋಡು ಮೂಲದ ಮಹಿಳೆ 2.41 ಕೇಜಿ ಬಂಗಾರ ಅಕ್ರಮ ಸಾಗಿಸುವ ಯತ್ನದಲ್ಲಿ ಕಸ್ಟಮ್ಸ್ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಕಾಸರಗೋಡು ಮೂಲದ ಮೊಹಮ್ಮದ್ ಅಲಿ ಸಮೀರ ಎಂಬ ಹೆಸರಿನ ಮಹಿಳೆಯನ್ನು ತಪಾಸಣೆ ನಡೆಸಿದಾಗ ಮೈಯಲ್ಲಿ ಚಿನ್ನ ಇರುವುದು ಕಂಡುಬಂದಿದೆ. ಬಳಿಕ ಮಹಿಳಾ ಅಧಿಕಾರಿಗಳು ಸೇರಿ ತಪಾಸಣೆ ನಡೆಸಿದ್ದಾರೆ. ಆಕೆಯ ಸ್ಯಾನಿಟರಿ ಪ್ಯಾಡ್, ಸಾಕ್ಸ್ ಸೇರಿದಂತೆ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡಿದ್ದ ಚಿನ್ನದ ಗಟ್ಟಿ ಪತ್ತೆಯಾಗಿದೆ. ಒಟ್ಟು 2.41 ಕೇಜಿ ಬಂಗಾರ ಸಿಕ್ಕಿದ್ದು ಇದರ ಮೌಲ್ಯ ಸುಮಾರು 1.10 ಕೋಟಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿ ಮಹಿಳೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದಳು.

ಆಕೆಯ ಬ್ಯಾಗಿನಲ್ಲಿ ವಿದೇಶಿ ನಿರ್ಮಿತ ಸಿಗರೇಟು ಪ್ಯಾಕೆಟ್ ಗಳು ಪತ್ತೆಯಾಗಿದ್ದು ಅವನ್ನು ವಶಕ್ಕೆ ಪಡೆಯಲಾಗಿದೆ. ಕೋಪ್ಟಾ ನೀತಿಯಡಿ ಸಿಗರೇಟ್ ಸಾಗಾಟ ಅಕ್ರಮವಾಗಿದ್ದು ಪ್ರಕರಣ ದಾಖಲಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ಇಲಾಖೆ ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಸುಪರಿಡೆಂಟ್ ಪ್ರೀತಿ ಸುಮಾ, ರಾಕೇಶ್ ಕುಮಾರ್, ಕ್ಷಿತಿ ನಾಯಕ್ ಭಾಗವಹಿಸಿದ್ದರು.
Customs officers at Mangaluru International Airport seized gold and foreign origin cigarettes from a female passenger on Thursday March 11.The passenger, Mohammed Ali Sameera from Kasargod, came from Dubai by Air India flight.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm