ಬ್ರೇಕಿಂಗ್ ನ್ಯೂಸ್
12-03-21 11:21 am Mangalore Correspondent ಕ್ರೈಂ
ಮಂಗಳೂರು, ಮಾ.11 : ರಸ್ತೆ ಬದಿ ನಿಲ್ಲಿಸಿದ ಕಾರಿನಿಂದ ನಗದು ಹಾಗೂ ವಿದೇಶಿ ಕರೆನ್ಸಿ ಹೊಂದಿದ್ದ ಬ್ಯಾಗನ್ನು ಕಳವು ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ಬೆಳಗ್ಗೆ ಚೇತನ್ ಕುಮಾರ್ ಎಂಬವರು ಮಧ್ಯಾಹ್ನ 12:40ರ ವೇಳೆಗೆ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಬಂದು ಚಿಲಿಂಬಿ ಸೂಪರ್ ಮಾರ್ಕೆಟ್ ಎದುರುಗಡೆ ರಸ್ತೆ ಬದಿ ಕಾರು ನಿಲ್ಲಿಸಿ ಸಾಯಿ ಬಾಬಾ ಮಂದಿರಕ್ಕೆ ತೆರಳಿದ್ದರು.

ಮಧ್ಯಾಹ್ನ 1:20ಕ್ಕೆ ಮರಳಿ ಕಾರಿನ ಬಳಿ ಬಂದಾಗ ಕಾರಿನ ಎಡಬದಿ ಹಿಂಬದಿ ಗ್ಲಾಸ್ನ್ನು ಒಡೆದು ಕಾರಿ ನೊಳಗಿದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಅದರಲ್ಲಿ 20 ಸಾವಿರ ರೂ. ನಗದು, 40 ಸಾವಿರ ರೂ. ಮೌಲ್ಯದ ವಿದೇಶಿ ಕರೆನ್ಸಿ, ಎಟಿಎಂ ಕಾರ್ಡ್, ಎಮಿರೇಟ್ಸ್ ಐಡಿ, ಆಧಾರ್ ಕಾರ್ಡ್, ತನ್ನ ಪತ್ನಿಯ ದುಬೈ ಇಸ್ಲಾಮಿಕ್ ಬ್ಯಾಂಕ್ ಎಟಿಎಂ ಕಾರ್ಡ್, ಅಲ್ಲದೆ ಪಾಸ್ಪೋರ್ಟ್ ಇತ್ತೆಂದು ತಿಳಿದುಬಂದಿದೆ.
ಚೇತನ್ ಕುಮಾರ್ ದುಬಾಯಿನಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದು, ಇನ್ನು ಕೆಲವೇ ದಿನಗಳಲ್ಲಿ ವಾಪಸ್ ಹೋಗುವವರಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ತಿಳಿದವರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The window glass of a car was broken and a passport, Rs 20,000 in cash and foreign currency worth Rs 40,000 found inside were taken away by thieves on Thursday March 11 during the daytime
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 03:39 pm
HK News Staffer
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm