ಬ್ರೇಕಿಂಗ್ ನ್ಯೂಸ್
13-03-21 11:24 am Udupi Correspondent ಕ್ರೈಂ
ಉಡುಪಿ, ಮಾ.13: ಕಸ ಹೆಕ್ಕಲು ಬಂದಿದ್ದ ಪೌರ ಕಾರ್ಮಿಕರ ಮೇಲೆ ಇಲೆಕ್ಟ್ರಾನಿಕ್ ಶಾಪ್ ಮಾಲೀಕ ಮತ್ತು ಸಿಬಂದಿ ಸೇರಿ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದ ಬಸ್ ನಿಲ್ದಾಣ ಪರಿಸರದಲ್ಲಿ ನಡೆದಿದೆ.


ಒಣ ಕಸ, ಹಸಿ ಕಸದ ಬಗ್ಗೆ ಕೇಳಿದ ಪೌರ ಕಾರ್ಮಿಕರ ಪ್ರಶ್ನೆಗೆ, ಇಲೆಕ್ಟ್ರಾನಿಕ್ ಶಾಪ್ ಓನರ್ ಎಗರಾಡಿದ್ದಾನೆ. ಕಸ ಎತ್ತುವ ವಾಹನದ ಚಾಲಕ ಸಂಜು ಮಾದಾರ ಮತ್ತು ಇನ್ನೊಬ್ವ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಘಟನೆಯನ್ನು ಸ್ಥಳೀಯರು ವಿಡಿಯೋ ಮಾಡಿದ್ದು ಅದು ವೈರಲ್ ಆಗುತ್ತಿದ್ದಂತೆ ಅಂಗಡಿ ಮಾಲೀಕರ ವಿರುದ್ಧ ಆಕ್ರೋಶ ಕೇಳಿಬಂದಿದೆ.
ವಿಷಯ ತಿಳಿದು ನಗರಸಭೆ ಆರೋಗ್ಯಧಿಕಾರಿ ಕರುಣಾಕರ್ ಸ್ಥಳಕ್ಕೆ ಬಂದಿದ್ದು ವಿಚಾರಣೆ ನಡೆಸಿದ್ದಾರೆ. ಅಧಿಕಾರಿ ಪ್ರಶ್ನೆ ಮಾಡುತ್ತಿದ್ದಾಗಲೇ ಪೌರ ಕಾರ್ಮಿಕರ ಮೇಲೆ ಮತ್ತೆ ಅಂಗಡಿ ಮಾಲೀಕ ಹಲ್ಲೆಗೆ ಮುಂದಾಗಿದ್ದಾನೆ.


ವಿಡಿಯೋ ಮತ್ತು ಪೌರ ಕಾರ್ಮಿಕರಿಗೆ ಹಲ್ಲೆ ನಡೆಸಿದ ಘಟನೆ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದೆ. ಟ್ವಿಟರ್ ನಲ್ಲಿಯೂ ಆಕ್ರೋಶ ವ್ಯಕ್ತವಾಗಿದೆ. ಟ್ವಿಟರ್ ನಲ್ಲಿ ಸಾರ್ವಜನಿಕರ ಪ್ರಶ್ನೆಗೆ ಉತ್ತರ ನೀಡಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಎಸ್ಪಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಆರೋಪಿಗಳನ್ನು ಬಚಾವ್ ಮಾಡಲಾಗುತ್ತಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದೇನೆ. ಇದರ ಜೊತೆಗೆ ನಮ್ಮ ನಗರವನ್ನು ಕ್ಲೀನ್ ಮಾಡುವ ಪೌರ ಕಾರ್ಮಕರಿಗೆ ರಕ್ಷಣೆ ನೀಡುವಂತೆ ಒತ್ತಾಯ ಮಾಡಿದ್ದೇನೆ ಎಂದು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಘಟನೆ ಸಂಬಂಧಿಸಿ ಉಡುಪಿ ಪೊಲೀಸರು ನೇಜಾರು ನಿವಾಸಿ ಇಸ್ಮಾಯಿಲ್ (55) ಮತ್ತು ಹೂಡೆಯ ಸುಹೈಲ್ (28) ಎಂಬವರನ್ನು ಬಂಧಿಸಿದ್ದಾರೆ.
Video:
An owner of a reputed electronic shop and his staff in Udupi reportedly attacked a civic worker over a Garbage issue near Udupi City Bus Stand.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am