ಬ್ರೇಕಿಂಗ್ ನ್ಯೂಸ್
16-03-21 11:54 am Headline Karnataka News Network ಕ್ರೈಂ
ಕಾರವಾರ,ಮಾ16 : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಜನರನ್ನು ನಂಬಿಸಿ ಅವರಿಂದ ಹಣ ಪಡೆದು ಮೋಸ ಮಾಡುತ್ತಿದ್ದ ಅಂತಾರಾಷ್ಟ್ರೀಯ ಸೈಬರ್ ವಂಚಕರ ತಂಡವೊಂದನ್ನು ಉತ್ತರಕನ್ನಡ ಜಿಲ್ಲಾ ಸೈಬರ್ ಕ್ರೈಂ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಕೋಲಾರದ ವಸಂತ ನಗರದ ಅಶೋಕ ಎಂ.ಎನ್, ಅಸ್ಸೋಂ ಮೂಲದ ಬುಲ್ಲಿಯಾಂಗಿರ್ ಹಲಮ್, ತ್ರಿಪುರದ ದರ್ಟಿನ್ಬಿರ್ ಹಲಮ್, ಮಣಿಪುರದ ವಾರಿಂಗಮ್ ಪೂಂಗಶೊಕ್ ಬಂಧಿತ ಆರೋಪಿಗಳು.

ಕಳೆದ 7 ತಿಂಗಳ ಹಿಂದೆ ಹೊನ್ನಾವರ ಮೂಲದ ಯುವತಿಯೋರ್ವಳನ್ನು ಇಮೇಲ್ ಮೂಲಕ ಸಂಪರ್ಕಿಸಿದ ತಂಡವೊಂದು ಅಮೆರಿಕಾದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 57 ಲಕ್ಷ ರೂ. ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚಿಸಿತ್ತು. ಈ ಕುರಿತು ಯುವತಿ ಫೆ.10ರಂದು ಕಾರವಾರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.
ಬರೋಬ್ಬರಿ ಅರ್ಧ ಕೋಟಿಗೂ ಹೆಚ್ಚು ಹಣ ಕಳೆದುಕೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಬದರಿನಾಥ್ ಅವರು, ಸಿಇಎನ್ ಪೊಲೀಸ್ ಠಾಣೆಯ ಸಿಪಿಐ ಪಿ. ಸೀತಾರಾಮ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ತನಿಖೆಗೆ ಸೂಚಿಸಿದ್ದರು. ಅದರಂತೆ ಬರೋಬ್ಬರಿ ಒಂದು ತಿಂಗಳು ಜಾಲಾಡಿದ ಪೊಲೀಸರು ನೈಜೀರಿಯಾ ಮೂಲದ ಗ್ಯಾಂಗ್ ಬೆಂಗಳೂರಿನಲ್ಲಿ ಇದ್ದು ಮೋಸ ಮಾಡಿರುವುದನ್ನು ಪತ್ತೆ ಹಚ್ಚಿದ್ದರು.

ಅದರಂತೆ ಬೆಂಗಳೂರಿಗೆ ತೆರಳಿ ಕಾರ್ಯಾಚರಣೆ ನಡೆಸಿದ ತಂಡ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದೆ. ಬಂಧಿತರಿಂದ ವಿವಿಧ ಬ್ಯಾಂಕ್ ಖಾತೆಯಲ್ಲಿದ್ದ 2.61 ಲಕ್ಷ ರೂ. ನಗದು, ಸ್ವೈಪ್ ಮಶಿನ್, ಬಯೋಮೆಟ್ರಿಕ್ ಫಿಂಗರ್ ಪ್ರಿಂಟ್, 34 ಬ್ಯಾಂಕ್ ಅಕೌಂಟ್, 24 ವಿವಿಧ ಬ್ಯಾಂಕ್ ಎಟಿಎಂ, 24 ಚೆಕ್ ಬುಕ್, 23 ಮೊಬೈಲ್, 2 ಲ್ಯಾಪ್ಟಾಪ್, 17 ಸಿಮ್ ಕಾರ್ಡ್ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ನೈಜೀರಿಯಾ ಮೂಲದ ಗ್ಯಾಂಗ್ ಇಂತಹದೊಂದು ದೊಡ್ಡ ಸೈಬರ್ ಕ್ರೈಮ್ ನಡೆಸಿದೆ.
ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದಿದ್ದು, ಇನ್ನೂ ಹಲವರು ಇದರಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಸಂಪೂರ್ಣ ತನಿಖೆ ಪೂರ್ಣಗೊಂಡ ಬಳಿಕವೇ ಆರೋಪಿಗಳ ಕೃತ್ಯ ಹೊರ ಬರಲಿದೆ ಎಂದರು.
Four held in Bengaluru by cybercrime for cheating job aspirants online in the name of giving jobs abroad.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm