ಬ್ರೇಕಿಂಗ್ ನ್ಯೂಸ್
16-03-21 11:54 am Headline Karnataka News Network ಕ್ರೈಂ
ಕಾರವಾರ,ಮಾ16 : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಜನರನ್ನು ನಂಬಿಸಿ ಅವರಿಂದ ಹಣ ಪಡೆದು ಮೋಸ ಮಾಡುತ್ತಿದ್ದ ಅಂತಾರಾಷ್ಟ್ರೀಯ ಸೈಬರ್ ವಂಚಕರ ತಂಡವೊಂದನ್ನು ಉತ್ತರಕನ್ನಡ ಜಿಲ್ಲಾ ಸೈಬರ್ ಕ್ರೈಂ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಕೋಲಾರದ ವಸಂತ ನಗರದ ಅಶೋಕ ಎಂ.ಎನ್, ಅಸ್ಸೋಂ ಮೂಲದ ಬುಲ್ಲಿಯಾಂಗಿರ್ ಹಲಮ್, ತ್ರಿಪುರದ ದರ್ಟಿನ್ಬಿರ್ ಹಲಮ್, ಮಣಿಪುರದ ವಾರಿಂಗಮ್ ಪೂಂಗಶೊಕ್ ಬಂಧಿತ ಆರೋಪಿಗಳು.

ಕಳೆದ 7 ತಿಂಗಳ ಹಿಂದೆ ಹೊನ್ನಾವರ ಮೂಲದ ಯುವತಿಯೋರ್ವಳನ್ನು ಇಮೇಲ್ ಮೂಲಕ ಸಂಪರ್ಕಿಸಿದ ತಂಡವೊಂದು ಅಮೆರಿಕಾದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 57 ಲಕ್ಷ ರೂ. ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚಿಸಿತ್ತು. ಈ ಕುರಿತು ಯುವತಿ ಫೆ.10ರಂದು ಕಾರವಾರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.
ಬರೋಬ್ಬರಿ ಅರ್ಧ ಕೋಟಿಗೂ ಹೆಚ್ಚು ಹಣ ಕಳೆದುಕೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಬದರಿನಾಥ್ ಅವರು, ಸಿಇಎನ್ ಪೊಲೀಸ್ ಠಾಣೆಯ ಸಿಪಿಐ ಪಿ. ಸೀತಾರಾಮ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ತನಿಖೆಗೆ ಸೂಚಿಸಿದ್ದರು. ಅದರಂತೆ ಬರೋಬ್ಬರಿ ಒಂದು ತಿಂಗಳು ಜಾಲಾಡಿದ ಪೊಲೀಸರು ನೈಜೀರಿಯಾ ಮೂಲದ ಗ್ಯಾಂಗ್ ಬೆಂಗಳೂರಿನಲ್ಲಿ ಇದ್ದು ಮೋಸ ಮಾಡಿರುವುದನ್ನು ಪತ್ತೆ ಹಚ್ಚಿದ್ದರು.

ಅದರಂತೆ ಬೆಂಗಳೂರಿಗೆ ತೆರಳಿ ಕಾರ್ಯಾಚರಣೆ ನಡೆಸಿದ ತಂಡ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದೆ. ಬಂಧಿತರಿಂದ ವಿವಿಧ ಬ್ಯಾಂಕ್ ಖಾತೆಯಲ್ಲಿದ್ದ 2.61 ಲಕ್ಷ ರೂ. ನಗದು, ಸ್ವೈಪ್ ಮಶಿನ್, ಬಯೋಮೆಟ್ರಿಕ್ ಫಿಂಗರ್ ಪ್ರಿಂಟ್, 34 ಬ್ಯಾಂಕ್ ಅಕೌಂಟ್, 24 ವಿವಿಧ ಬ್ಯಾಂಕ್ ಎಟಿಎಂ, 24 ಚೆಕ್ ಬುಕ್, 23 ಮೊಬೈಲ್, 2 ಲ್ಯಾಪ್ಟಾಪ್, 17 ಸಿಮ್ ಕಾರ್ಡ್ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ನೈಜೀರಿಯಾ ಮೂಲದ ಗ್ಯಾಂಗ್ ಇಂತಹದೊಂದು ದೊಡ್ಡ ಸೈಬರ್ ಕ್ರೈಮ್ ನಡೆಸಿದೆ.
ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದಿದ್ದು, ಇನ್ನೂ ಹಲವರು ಇದರಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಸಂಪೂರ್ಣ ತನಿಖೆ ಪೂರ್ಣಗೊಂಡ ಬಳಿಕವೇ ಆರೋಪಿಗಳ ಕೃತ್ಯ ಹೊರ ಬರಲಿದೆ ಎಂದರು.
Four held in Bengaluru by cybercrime for cheating job aspirants online in the name of giving jobs abroad.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 11:47 am
Mangaluru Staffer
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am