ಬ್ರೇಕಿಂಗ್ ನ್ಯೂಸ್
19-03-21 12:55 pm Mangalore Correspondent ಕ್ರೈಂ
Photo credits : Representative Image
ಮಂಗಳೂರು, ಮಾ.19:ಮಂಗಳೂರಿನ ಸಿಸಿಬಿ ಪೊಲೀಸರ ಕಾರು ಮಾರಾಟ ಪ್ರಕರಣದ ವಿಚಾರದಲ್ಲಿ ಬೆಂಗಳೂರಿನ ಸಿಐಡಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ. ಮಾರಾಟ ಮಾಡಿರುವ ಜಾಗ್ವಾರ್ ಕಾರನ್ನು ಸಿಐಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದು, ಖರೀದಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪೊಲೀಸರು ವಶಕ್ಕೆ ಪಡೆದ ಕಾರನ್ನು ದಿವ್ಯದರ್ಶನ್ ಎಂಬಾತ ಮಧ್ಯವರ್ತಿಯಾಗಿ ಡೀಲ್ ಮಾಡಿದ್ದ. ಕಾರು ಖರೀದಿಸಿದ ತೇಜಿಂದರ್ ಸಿಂಗ್ ತನಗೆ ಕಾರು ತಂದುಕೊಟ್ಟಿದ್ದು ಮತ್ತು ಡೀಲ್ ಕುದುರಿಸಿದ್ದು ಮಧ್ಯವರ್ತಿ ಎನ್ನುವ ವಿಚಾರವನ್ನು ಬಾಯಿಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಡೀಲ್ ರಾಜ ದಿವ್ಯದರ್ಶನ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಮಾಹಿತಿ ಪ್ರಕಾರ, ಹೈಎಂಡ್ ಜಾಗ್ವಾರ್ ಕಾರನ್ನು ಕೇವಲ 14.5 ಲಕ್ಷಕ್ಕೆ ಮಾರಾಟ ಮಾಡಲಾಗಿತ್ತು ಎನ್ನಲಾಗುತ್ತಿದೆ. ಈ ಮಾಹಿತಿಯನ್ನು ಖರೀದಿದಾರ ತೇಜಿಂದರ್ ಸಿಂಗ್ ಅಧಿಕಾರಿಗಳ ಬಳಿ ಹಂಚಿಕೊಂಡಿದ್ದಾನೆ. ಇದೇ ಕಾರಣಕ್ಕೆ ಮಂಗಳೂರು ಪೊಲೀಸರ ಬ್ರೋಕರ್ ಆಗಿದ್ದ ದಿವ್ಯದರ್ಶನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ಲಂಚದ ಹಣ ಸಂಗ್ರಹ ಮತ್ತು ಈ ರೀತಿಯ ಡೀಲಿಂಗ್ ನಡೆಸುತ್ತಿದ್ದ ಕಾರಣಕ್ಕೆ ಡಿಪಾರ್ಟ್ಮೆಂಟ್ ಒಳಗೆ ಈತನಿಗೆ ಡೀಡಿ ಎಂದೇ ನಿಕ್ ನೇಮ್ ಇತ್ತು.

ಕಾರು ಮಾರಾಟದಲ್ಲಿ ಬಂದ ಹಣವನ್ನು ಯಾರೆಲ್ಲಾ ಹಂಚಿಕೊಂಡಿದ್ದಾರೆ ಎಂಬ ಬಗ್ಗೆ ಆತನ ಬಾಯಿ ಬಿಡಿಸುತ್ತಿದ್ದಾರೆ. ಈ ಹಿಂದೆ ಸಿಸಿಬಿಯಲ್ಲಿ ಎಸ್ಐ ಆಗಿದ್ದ ಕಬ್ಬಾಳರಾಜ್ ಮತ್ತು ನಾರ್ಕೋಟಿಕ್ ಠಾಣೆಯಲ್ಲಿ ಇನ್ ಸ್ಪೆಕ್ಟರ್ ಆಗಿದ್ದ ರಾಮಕೃಷ್ಣ ಎಷ್ಟು ಹಣ ಪಡೆದಿದ್ದಾರೆ ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆರಂಭದಲ್ಲಿ ರಾಮಕೃಷ್ಣ ಕಾರು ಡೀಲಿಂಗ್ ವ್ಯವಹಾರದಲ್ಲಿ ಭಾಗಿಯಾಗಿಲ್ಲ ಎನ್ನಲಾಗಿತ್ತು. ಆದರೆ, ಸಿಸಿಬಿಯ ಗೋಲ್ಮಾಲ್ ತಂಡಕ್ಕೆ ಸಾಥ್ ನೀಡಿದ್ದು ಮತ್ತು ವಶಕ್ಕೆ ಪಡೆದ ಕಾರನ್ನು ಎಫ್ಐಆರ್ ನಲ್ಲಿ ತೋರಿಸದೆ ಕರ್ತವ್ಯ ಲೋಪ ಎಸಗಿದ್ದರು ಎಂಬ ಆರೋಪಿಗಳಿದ್ದವು. ಸದ್ಯಕ್ಕೆ ಇವರಿಬ್ಬರು ಸೇರಿದಂತೆ ನಾಲ್ವರನ್ನು ಸಸ್ಪೆಂಡ್ ಮಾಡಲಾಗಿದೆ.

ಡೀಲಿನಲ್ಲಿ ಪತ್ರಕರ್ತರಿಗೆಷ್ಟು ಪಾಲು ?
ಸಿಸಿಬಿಯ ಗೋಲ್ಮಾಲ್ ತಂಡಕ್ಕೆ ಮಂಗಳೂರಿನ ಇಬ್ಬರು ಪತ್ರಕರ್ತರು ಸಾಥ್ ನೀಡಿದ್ದರು ಎನ್ನೋ ವಿಚಾರ ಬಯಲಾಗಿತ್ತು. ದಿವ್ಯದರ್ಶನ್ ಇವೆಲ್ಲದಕ್ಕೂ ಕೊಂಡಿಯಾಗಿದ್ದ ಮತ್ತು ಲಾಡ್ಜ್ ಗಳಲ್ಲಿಯೂ ಪೊಲೀಸ್ ಅಧಿಕಾರಿಗಳಿಗೆ ಬೇಕು- ಬೇಡಗಳನ್ನು ಪೂರೈಸುತ್ತಿದ್ದ ಎನ್ನುವ ಮಾಹಿತಿಗಳಿದ್ದವು. ಈಗ 14 ಲಕ್ಷ ಹಣದಲ್ಲಿ ಪತ್ರಕರ್ತರಿಗೆಷ್ಟು ಬಂದಿದೆ, ಪೊಲೀಸರಿಗೆ ಎಷ್ಟು ಸಂದಾಯವಾಗಿದೆ ಎನ್ನೋದ್ರ ಬಗ್ಗೆ ದಿವ್ಯದರ್ಶನ್ ಬಾಯಿಬಿಟ್ಟರೆ ಹಣ ಪಡೆದಿರುವ ಎಲ್ಲರಿಗೂ ಶಾಸ್ತಿ ಆಗಲಿದೆ. ಇಲ್ಲಿ ಕಾರು ಖರೀದಿಸಿದ ವ್ಯಕ್ತಿಗಿಂತಲೂ ಬ್ರೋಕರ್ ಕೆಲಸ ಮಾಡಿದ್ದವರು ಬಂಧನ ಆಗುವ ಸಾಧ್ಯತೆ ಹೆಚ್ಚು. ಖರೀದಿದಾರನಿಗೆ ಗೋಲ್ಮಾಲ್ ಪ್ರವರ ಗೊತ್ತಿರದ ಕಾರಣ ಆತನನ್ನು ವಿಚಾರಣೆ ನಡೆಸಿ, ಬಿಟ್ಟುಬಿಡುವ ಸಾಧ್ಯತೆಯೂ ಇದೆ.

ಇದೇ ವೇಳೆ, ಮನಿ ಡಬ್ಲಿಂಗ್ ಪ್ರಕರಣದ ಸೂತ್ರಧಾರರು ಎನ್ನಲಾದ, ಎಲಿಯಾ ಕನ್ ಸ್ಟ್ರಕ್ಷನ್ ಹೆಸರಿನಲ್ಲಿ ಗೋಲ್ಮಾಲ್ ವಹಿವಾಟು ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನೂ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳನ್ನು ಬಚಾವ್ ಮಾಡಲು ಸಿಸಿಬಿ ತಂಡ ಎಷ್ಟು ಹಣ ಪಡೆದಿತ್ತು ಹಾಗೂ ಗೋಲ್ಮಾಲ್ ಮಾಡಿದ್ದ ಹಣವನ್ನು ಕೇರಳ ಮತ್ತು ಕರ್ನಾಟಕದ ಎಲ್ಲೆಲ್ಲಿ ಹೂಡಿಕೆ ಮಾಡಿದ್ದಾರೆ ಎಂಬ ಮಾಹಿತಿ ಕಲೆಹಾಕುತ್ತಿದ್ದಾರೆ.
CID seize Luxury car Jaguar in Bangalore that was missing from CCB police custody in Mangalore. Mediator Divya Darshan has been taken into custody.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am