ಬ್ರೇಕಿಂಗ್ ನ್ಯೂಸ್
19-03-21 01:10 pm Headline Karnataka News Network ಕ್ರೈಂ
ಹಾಸನ, ಮಾ.19 : ಸಕಲೇಶಪುರ ತಾಲ್ಲೂಕಿನ ಕರಡಿಗಾಲ ಗ್ರಾಮದಲ್ಲಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕ್ಕಾಗಿ ಹೆತ್ತಮ್ಮನನ್ನೇ ಕೊಂದು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.
ತಂಗ್ಯಮ್ಮ(65) ಕೊಲೆಯಾದ ಮಹಿಳೆಯಾಗಿದ್ದು, ಪುತ್ರರಾದ ರಾಜೇಗೌಡ(48) ಮತ್ತು ಸುಬ್ರಮಣಿ(45) ಆರೋಪಿಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಗಿರವಿ ಇಟ್ಟಿದ್ದ ಒಡವೆ ಬಿಡಿಸಿ ತಮಗೆ ಕೊಡುವಂತೆ ಮಕ್ಕಳು ಪೀಡಿಸುತ್ತಿದ್ದರು. ಒಡವೆಯನ್ನ ಕೊಡಲು ಒಪ್ಪದಿದ್ದಕ್ಕೆ ತಾಯಿಯ ಕುತ್ತಿಗೆ ಹಿಸುಕಿ ಹೈತ್ಯೆಗೈದಿದ್ದಾರೆ. ಮಾರ್ಚ್ 17ರಂದು ಮಹಿಳೆ ಶವ ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿ ಪತ್ತೆಯಾಗಿತ್ತು. ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪುತ್ರರು ನಂಬಿಸಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.
ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾವಿನ ಕುರಿತಾಗಿ ಪೊಲೀಸರಿಗೆ ಕಿರಿಯ ಪುತ್ರ ಹೇಮಂತ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆಗೆ ಇಳಿದ ಸಕಲೇಶಪುರ ಗ್ರಾಮಾಂತರ ಪೊಲೀಸರಿಗೆ ಪುತ್ರರೇ ಕೊಲೆ ಮಾಡಿರುವುದು ತಿಳಿದು ಬಂದಿದೆ.
ಮಾರ್ಚ್ 16 ರ ಸಂಜೆ ತಾಯಿಯನ್ನ ಕೊಲೆ ಮಾಡಿದ್ದರು. ಮರುದಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕತೆ ಕಟ್ಟಿ ಅಂತ್ಯಕ್ರಿಯೆಗೆ ತಯಾರು ನಡೆಸಿದ್ದರು. ಇದೀಗ ನಿಜಾಂಶ ತಿಳಿದು ಬಂದಿದ್ದು ಮಾರ್ಚ್ 18ಕ್ಕೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Mother killed by two sons over issue of Money in Hassan. Two have been arrested by the Police.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm