ಬ್ರೇಕಿಂಗ್ ನ್ಯೂಸ್
19-03-21 01:10 pm Headline Karnataka News Network ಕ್ರೈಂ
ಹಾಸನ, ಮಾ.19 : ಸಕಲೇಶಪುರ ತಾಲ್ಲೂಕಿನ ಕರಡಿಗಾಲ ಗ್ರಾಮದಲ್ಲಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕ್ಕಾಗಿ ಹೆತ್ತಮ್ಮನನ್ನೇ ಕೊಂದು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.
ತಂಗ್ಯಮ್ಮ(65) ಕೊಲೆಯಾದ ಮಹಿಳೆಯಾಗಿದ್ದು, ಪುತ್ರರಾದ ರಾಜೇಗೌಡ(48) ಮತ್ತು ಸುಬ್ರಮಣಿ(45) ಆರೋಪಿಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಗಿರವಿ ಇಟ್ಟಿದ್ದ ಒಡವೆ ಬಿಡಿಸಿ ತಮಗೆ ಕೊಡುವಂತೆ ಮಕ್ಕಳು ಪೀಡಿಸುತ್ತಿದ್ದರು. ಒಡವೆಯನ್ನ ಕೊಡಲು ಒಪ್ಪದಿದ್ದಕ್ಕೆ ತಾಯಿಯ ಕುತ್ತಿಗೆ ಹಿಸುಕಿ ಹೈತ್ಯೆಗೈದಿದ್ದಾರೆ. ಮಾರ್ಚ್ 17ರಂದು ಮಹಿಳೆ ಶವ ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿ ಪತ್ತೆಯಾಗಿತ್ತು. ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪುತ್ರರು ನಂಬಿಸಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.
ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾವಿನ ಕುರಿತಾಗಿ ಪೊಲೀಸರಿಗೆ ಕಿರಿಯ ಪುತ್ರ ಹೇಮಂತ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆಗೆ ಇಳಿದ ಸಕಲೇಶಪುರ ಗ್ರಾಮಾಂತರ ಪೊಲೀಸರಿಗೆ ಪುತ್ರರೇ ಕೊಲೆ ಮಾಡಿರುವುದು ತಿಳಿದು ಬಂದಿದೆ.
ಮಾರ್ಚ್ 16 ರ ಸಂಜೆ ತಾಯಿಯನ್ನ ಕೊಲೆ ಮಾಡಿದ್ದರು. ಮರುದಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕತೆ ಕಟ್ಟಿ ಅಂತ್ಯಕ್ರಿಯೆಗೆ ತಯಾರು ನಡೆಸಿದ್ದರು. ಇದೀಗ ನಿಜಾಂಶ ತಿಳಿದು ಬಂದಿದ್ದು ಮಾರ್ಚ್ 18ಕ್ಕೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Mother killed by two sons over issue of Money in Hassan. Two have been arrested by the Police.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 02:52 pm
HK News Desk
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
ರಾಸಾಯನಿಕ ಸಾಗಿಸುತ್ತಿದ್ದ ಸಿಂಗಾಪುರದ ಹಡಗಿನಲ್ಲಿ ಭಾ...
09-06-25 05:16 pm
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
12-06-25 02:23 pm
Mangalore Correspondent
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
Chakravarthy Sulibele, Mangalore Police: ಐಜಿ...
11-06-25 07:03 pm
Former MLA Moideen Bava, FIR: ಪಣಂಬೂರು ಎನ್ಎಂಪಿ...
11-06-25 06:04 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm