ಬ್ರೇಕಿಂಗ್ ನ್ಯೂಸ್
31-07-20 03:16 pm Bangalore Correspondent ಕ್ರೈಂ
ಬೆಂಗಳೂರು: ಚೆಕ್ನಲ್ಲಿನ ಅಂಕಿಗಳನ್ನು ತಿದ್ದಿ ಸಹೋದ್ಯೋಗಿಗಳೇ ಉದ್ಯಮಿಗೆ ಬರೋಬ್ಬರಿ 6.30 ಕೋಟಿ ರೂ. ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.
ರಾಜಶೇಖರ ರೆಡ್ಡಿ ವಂಚನೆಗೊಳಗಾದ ಉದ್ಯಮಿಯಾಗಿದ್ದು, ಭಾಸ್ಕರ್ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ವಂಚಿಸಿದ ಆರೋಪಿಗಳು. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿಗಳು ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಗೆ ಬೃಹತ್ ವಂಚನೆ ಮಾಡಿದ್ದಾರೆ.
ಆರೋಪಿಗಳು ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದರು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷ ರೂ.ಗಳ 7 ಚೆಕ್ಗಳನ್ನು ಆರೋಪಿಗಳು 80 ಲಕ್ಷ ರೂ.ಗಳಿಗೆ ಮಾರ್ಪಾಡು ಮಾಡಿದ್ದಾರೆ. 7 ಲಕ್ಷದ ಒಂದು ಚೆಕ್ನ್ನು 70 ಲಕ್ಷ ರೂ.ಗೆ ಬದಲಿಸಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಒಂದು ವರ್ಷದ ಹಿಂದಿನ ಮೋಸ ಆಡಿಟ್ ವೇಳೆ ಬಯಲಿಗೆ ಬಂದಿದೆ. ಅಸಲಿ ವಿಚಾರ ತಿಳಿಯುತ್ತಿದ್ದಂತೆ 1,00,60,000 ರೂ.ಗಳನ್ನು ಆರೋಪಿಗಳು ಮರಳಿ ನೀಡಿದ್ದಾರೆ. ಉಳಿದ ಹಣ ವಾಪಾಸ್ ನೀಡದೆ ಸತಾಯಿಸುತ್ತಿದ್ದಾರೆ.
ಉಳಿದ ಹಣವನ್ನು ನೀಡದೆ ಕಾಡಿಸುತ್ತಿದ್ದ ಹಿನ್ನೆಲೆ ರಾಜಶೇಖರ್ ರೆಡ್ಡಿ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm