ಬ್ರೇಕಿಂಗ್ ನ್ಯೂಸ್
31-07-20 03:16 pm Bangalore Correspondent ಕ್ರೈಂ
ಬೆಂಗಳೂರು: ಚೆಕ್ನಲ್ಲಿನ ಅಂಕಿಗಳನ್ನು ತಿದ್ದಿ ಸಹೋದ್ಯೋಗಿಗಳೇ ಉದ್ಯಮಿಗೆ ಬರೋಬ್ಬರಿ 6.30 ಕೋಟಿ ರೂ. ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.
ರಾಜಶೇಖರ ರೆಡ್ಡಿ ವಂಚನೆಗೊಳಗಾದ ಉದ್ಯಮಿಯಾಗಿದ್ದು, ಭಾಸ್ಕರ್ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ವಂಚಿಸಿದ ಆರೋಪಿಗಳು. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿಗಳು ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಗೆ ಬೃಹತ್ ವಂಚನೆ ಮಾಡಿದ್ದಾರೆ.
ಆರೋಪಿಗಳು ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದರು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷ ರೂ.ಗಳ 7 ಚೆಕ್ಗಳನ್ನು ಆರೋಪಿಗಳು 80 ಲಕ್ಷ ರೂ.ಗಳಿಗೆ ಮಾರ್ಪಾಡು ಮಾಡಿದ್ದಾರೆ. 7 ಲಕ್ಷದ ಒಂದು ಚೆಕ್ನ್ನು 70 ಲಕ್ಷ ರೂ.ಗೆ ಬದಲಿಸಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಒಂದು ವರ್ಷದ ಹಿಂದಿನ ಮೋಸ ಆಡಿಟ್ ವೇಳೆ ಬಯಲಿಗೆ ಬಂದಿದೆ. ಅಸಲಿ ವಿಚಾರ ತಿಳಿಯುತ್ತಿದ್ದಂತೆ 1,00,60,000 ರೂ.ಗಳನ್ನು ಆರೋಪಿಗಳು ಮರಳಿ ನೀಡಿದ್ದಾರೆ. ಉಳಿದ ಹಣ ವಾಪಾಸ್ ನೀಡದೆ ಸತಾಯಿಸುತ್ತಿದ್ದಾರೆ.
ಉಳಿದ ಹಣವನ್ನು ನೀಡದೆ ಕಾಡಿಸುತ್ತಿದ್ದ ಹಿನ್ನೆಲೆ ರಾಜಶೇಖರ್ ರೆಡ್ಡಿ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm