ಬ್ರೇಕಿಂಗ್ ನ್ಯೂಸ್
23-03-21 12:39 pm Mangalore Correspondent ಕ್ರೈಂ
ಮಂಗಳೂರು, ಮಾ.23: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಮುಜೀಬ್ ರೆಹಮಾನ್ (30) ಬಂಧಿತ ಆರೋಪಿ. ಮೂಲತಃ ಮಂಜೇಶ್ವರದ ಉಪ್ಪಳ ನಿವಾಸಿಯಾಗಿರುವ ಈತ ನರಿಂಗಾನ ಗ್ರಾಮದ ಕಲ್ಲರಕೋಡಿ ಎಂಬಲ್ಲಿ ವಾಸವಿದ್ದ. ಮಾ.16ರಂದು ಬೆಳ್ಮ ಗ್ರಾಮದ ನಿತ್ಯಾನಂದ ನಗರದಲ್ಲಿ ಮನೆ ಬಾಡಿಗೆ ಕೇಳುವ ನೆಪದಲ್ಲಿ ಮೂರು ಮನೆಗೆ ಹೋಗಿದ್ದಾನೆ. ಅಜ್ಜಿ ಮಾತ್ರ ಇದ್ದ ಮನೆಗೆ ಬಂದಿದ್ದ ಯುವಕ ಮುಜೀಬ್, ಮನೆ ಬಾಡಿಗೆ ಕೊಡುತ್ತೀರಾ ಎಂದು ಕೇಳಿದ್ದಾನೆ. ಇಲ್ಲಪ್ಪಾ ನಾವೇ ಬಾಡಿಗೆ ಮನೆಯಲ್ಲಿದ್ದೇವೆ. ನಾವು ಖಾಲಿ ಮಾಡಿದಾಗ ಹೇಳುತ್ತೀವಿ ಎಂದಿದ್ದಾರೆ. ಅಲ್ಲದೆ, ಆತನ ನಂಬರ್ ಬರೆದಿಡುವಂತೆ ಹೇಳಿದ್ದಾರೆ. ಇದೇ ವೇಳೆ, ನಾನೊಮ್ಮೆ ಮನೆ ಒಳಗೆ ನೋಡುತ್ತೇನೆ ಎಂದು ಒಳಗೆ ಬಂದು ಕೋಣೆ ಒಳಗೆಲ್ಲ ಸುತ್ತಾಡಿದ್ದಾನೆ.

ಇದೇ ವೇಳೆ, ಮನೆಯ ಒಳಗಿಟ್ಟಿದ್ದ ಬ್ಯಾಗಿನಲ್ಲಿದ್ದ ಎರಡು ಚಿನ್ನದ ಸರವನ್ನು ಕಳವು ಮಾಡಿದ್ದಾನೆ. ಬಳಿಕ ಅಜ್ಜಿಯಲ್ಲಿ ಮತ್ತೆ ಬರುತ್ತೇನೆ ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದ. ಮನೆಗೆ ಮರಳಿದ್ದ ಸೋದರಿಯರು, ತಪಾಸಣೆ ನಡೆಸಿದಾಗ ಮನೆಯಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿರುವುದು ಕಂಡುಬಂದಿದೆ. ಕೋಣಾಜೆ ಠಾಣೆಗೆ ವೀಣಾ ಎಂಬವರು ದೂರು ನೀಡಿದ್ದರು.
ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸಿದಾಗ, ಯುವಕನೊಬ್ಬ ಅಲ್ಲಿನ ಮೂರ್ನಾಲ್ಕು ಮನೆಗಳಿಗೆ ತೆರಳಿದ್ದು ಕಂಡುಬಂದಿದೆ. ಅಲ್ಲದೆ, ಮಾಡೂರಿನಲ್ಲೂ ಇದೇ ರೀತಿ ಕೆಲವು ಮನೆಗಳಿಗೆ ತೆರಳಿದ್ದು ಕಂಡುಬಂದಿತ್ತು. ಚಹರೆ ಆಧರಿಸಿ, ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಮೂರುವರೆ ಪವನ್ ತೂಕದ ಕರಿಮಣಿ ಸರ ಮತ್ತು ಒಂದು ಪವನ್ ತೂಕದ ಸರ ಕಳವಾಗಿತ್ತು. ಅದನ್ನು ಪೊಲೀಸರು ಆರೋಪಿಯಿಂದ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಆತನ ಬಳಿಯಿದ್ದ ಏಕ್ಟಿವಾ ಹೊಂಡಾ ವಶಕ್ಕೆ ಪಡೆದಿದ್ದಾರೆ.
police arrest thief who flee with gold from a house in Ullal at Mangalore. The arrested has been identified as Majib.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am