ಬ್ರೇಕಿಂಗ್ ನ್ಯೂಸ್
23-03-21 12:39 pm Mangalore Correspondent ಕ್ರೈಂ
ಮಂಗಳೂರು, ಮಾ.23: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಮುಜೀಬ್ ರೆಹಮಾನ್ (30) ಬಂಧಿತ ಆರೋಪಿ. ಮೂಲತಃ ಮಂಜೇಶ್ವರದ ಉಪ್ಪಳ ನಿವಾಸಿಯಾಗಿರುವ ಈತ ನರಿಂಗಾನ ಗ್ರಾಮದ ಕಲ್ಲರಕೋಡಿ ಎಂಬಲ್ಲಿ ವಾಸವಿದ್ದ. ಮಾ.16ರಂದು ಬೆಳ್ಮ ಗ್ರಾಮದ ನಿತ್ಯಾನಂದ ನಗರದಲ್ಲಿ ಮನೆ ಬಾಡಿಗೆ ಕೇಳುವ ನೆಪದಲ್ಲಿ ಮೂರು ಮನೆಗೆ ಹೋಗಿದ್ದಾನೆ. ಅಜ್ಜಿ ಮಾತ್ರ ಇದ್ದ ಮನೆಗೆ ಬಂದಿದ್ದ ಯುವಕ ಮುಜೀಬ್, ಮನೆ ಬಾಡಿಗೆ ಕೊಡುತ್ತೀರಾ ಎಂದು ಕೇಳಿದ್ದಾನೆ. ಇಲ್ಲಪ್ಪಾ ನಾವೇ ಬಾಡಿಗೆ ಮನೆಯಲ್ಲಿದ್ದೇವೆ. ನಾವು ಖಾಲಿ ಮಾಡಿದಾಗ ಹೇಳುತ್ತೀವಿ ಎಂದಿದ್ದಾರೆ. ಅಲ್ಲದೆ, ಆತನ ನಂಬರ್ ಬರೆದಿಡುವಂತೆ ಹೇಳಿದ್ದಾರೆ. ಇದೇ ವೇಳೆ, ನಾನೊಮ್ಮೆ ಮನೆ ಒಳಗೆ ನೋಡುತ್ತೇನೆ ಎಂದು ಒಳಗೆ ಬಂದು ಕೋಣೆ ಒಳಗೆಲ್ಲ ಸುತ್ತಾಡಿದ್ದಾನೆ.

ಇದೇ ವೇಳೆ, ಮನೆಯ ಒಳಗಿಟ್ಟಿದ್ದ ಬ್ಯಾಗಿನಲ್ಲಿದ್ದ ಎರಡು ಚಿನ್ನದ ಸರವನ್ನು ಕಳವು ಮಾಡಿದ್ದಾನೆ. ಬಳಿಕ ಅಜ್ಜಿಯಲ್ಲಿ ಮತ್ತೆ ಬರುತ್ತೇನೆ ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದ. ಮನೆಗೆ ಮರಳಿದ್ದ ಸೋದರಿಯರು, ತಪಾಸಣೆ ನಡೆಸಿದಾಗ ಮನೆಯಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿರುವುದು ಕಂಡುಬಂದಿದೆ. ಕೋಣಾಜೆ ಠಾಣೆಗೆ ವೀಣಾ ಎಂಬವರು ದೂರು ನೀಡಿದ್ದರು.
ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸಿದಾಗ, ಯುವಕನೊಬ್ಬ ಅಲ್ಲಿನ ಮೂರ್ನಾಲ್ಕು ಮನೆಗಳಿಗೆ ತೆರಳಿದ್ದು ಕಂಡುಬಂದಿದೆ. ಅಲ್ಲದೆ, ಮಾಡೂರಿನಲ್ಲೂ ಇದೇ ರೀತಿ ಕೆಲವು ಮನೆಗಳಿಗೆ ತೆರಳಿದ್ದು ಕಂಡುಬಂದಿತ್ತು. ಚಹರೆ ಆಧರಿಸಿ, ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಮೂರುವರೆ ಪವನ್ ತೂಕದ ಕರಿಮಣಿ ಸರ ಮತ್ತು ಒಂದು ಪವನ್ ತೂಕದ ಸರ ಕಳವಾಗಿತ್ತು. ಅದನ್ನು ಪೊಲೀಸರು ಆರೋಪಿಯಿಂದ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಆತನ ಬಳಿಯಿದ್ದ ಏಕ್ಟಿವಾ ಹೊಂಡಾ ವಶಕ್ಕೆ ಪಡೆದಿದ್ದಾರೆ.
police arrest thief who flee with gold from a house in Ullal at Mangalore. The arrested has been identified as Majib.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm