ಬ್ರೇಕಿಂಗ್ ನ್ಯೂಸ್
23-03-21 12:39 pm Mangalore Correspondent ಕ್ರೈಂ
ಮಂಗಳೂರು, ಮಾ.23: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಮುಜೀಬ್ ರೆಹಮಾನ್ (30) ಬಂಧಿತ ಆರೋಪಿ. ಮೂಲತಃ ಮಂಜೇಶ್ವರದ ಉಪ್ಪಳ ನಿವಾಸಿಯಾಗಿರುವ ಈತ ನರಿಂಗಾನ ಗ್ರಾಮದ ಕಲ್ಲರಕೋಡಿ ಎಂಬಲ್ಲಿ ವಾಸವಿದ್ದ. ಮಾ.16ರಂದು ಬೆಳ್ಮ ಗ್ರಾಮದ ನಿತ್ಯಾನಂದ ನಗರದಲ್ಲಿ ಮನೆ ಬಾಡಿಗೆ ಕೇಳುವ ನೆಪದಲ್ಲಿ ಮೂರು ಮನೆಗೆ ಹೋಗಿದ್ದಾನೆ. ಅಜ್ಜಿ ಮಾತ್ರ ಇದ್ದ ಮನೆಗೆ ಬಂದಿದ್ದ ಯುವಕ ಮುಜೀಬ್, ಮನೆ ಬಾಡಿಗೆ ಕೊಡುತ್ತೀರಾ ಎಂದು ಕೇಳಿದ್ದಾನೆ. ಇಲ್ಲಪ್ಪಾ ನಾವೇ ಬಾಡಿಗೆ ಮನೆಯಲ್ಲಿದ್ದೇವೆ. ನಾವು ಖಾಲಿ ಮಾಡಿದಾಗ ಹೇಳುತ್ತೀವಿ ಎಂದಿದ್ದಾರೆ. ಅಲ್ಲದೆ, ಆತನ ನಂಬರ್ ಬರೆದಿಡುವಂತೆ ಹೇಳಿದ್ದಾರೆ. ಇದೇ ವೇಳೆ, ನಾನೊಮ್ಮೆ ಮನೆ ಒಳಗೆ ನೋಡುತ್ತೇನೆ ಎಂದು ಒಳಗೆ ಬಂದು ಕೋಣೆ ಒಳಗೆಲ್ಲ ಸುತ್ತಾಡಿದ್ದಾನೆ.

ಇದೇ ವೇಳೆ, ಮನೆಯ ಒಳಗಿಟ್ಟಿದ್ದ ಬ್ಯಾಗಿನಲ್ಲಿದ್ದ ಎರಡು ಚಿನ್ನದ ಸರವನ್ನು ಕಳವು ಮಾಡಿದ್ದಾನೆ. ಬಳಿಕ ಅಜ್ಜಿಯಲ್ಲಿ ಮತ್ತೆ ಬರುತ್ತೇನೆ ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದ. ಮನೆಗೆ ಮರಳಿದ್ದ ಸೋದರಿಯರು, ತಪಾಸಣೆ ನಡೆಸಿದಾಗ ಮನೆಯಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿರುವುದು ಕಂಡುಬಂದಿದೆ. ಕೋಣಾಜೆ ಠಾಣೆಗೆ ವೀಣಾ ಎಂಬವರು ದೂರು ನೀಡಿದ್ದರು.
ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸಿದಾಗ, ಯುವಕನೊಬ್ಬ ಅಲ್ಲಿನ ಮೂರ್ನಾಲ್ಕು ಮನೆಗಳಿಗೆ ತೆರಳಿದ್ದು ಕಂಡುಬಂದಿದೆ. ಅಲ್ಲದೆ, ಮಾಡೂರಿನಲ್ಲೂ ಇದೇ ರೀತಿ ಕೆಲವು ಮನೆಗಳಿಗೆ ತೆರಳಿದ್ದು ಕಂಡುಬಂದಿತ್ತು. ಚಹರೆ ಆಧರಿಸಿ, ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಮೂರುವರೆ ಪವನ್ ತೂಕದ ಕರಿಮಣಿ ಸರ ಮತ್ತು ಒಂದು ಪವನ್ ತೂಕದ ಸರ ಕಳವಾಗಿತ್ತು. ಅದನ್ನು ಪೊಲೀಸರು ಆರೋಪಿಯಿಂದ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಆತನ ಬಳಿಯಿದ್ದ ಏಕ್ಟಿವಾ ಹೊಂಡಾ ವಶಕ್ಕೆ ಪಡೆದಿದ್ದಾರೆ.
police arrest thief who flee with gold from a house in Ullal at Mangalore. The arrested has been identified as Majib.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am