ಬ್ರೇಕಿಂಗ್ ನ್ಯೂಸ್
23-03-21 12:39 pm Mangalore Correspondent ಕ್ರೈಂ
ಮಂಗಳೂರು, ಮಾ.23: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಮುಜೀಬ್ ರೆಹಮಾನ್ (30) ಬಂಧಿತ ಆರೋಪಿ. ಮೂಲತಃ ಮಂಜೇಶ್ವರದ ಉಪ್ಪಳ ನಿವಾಸಿಯಾಗಿರುವ ಈತ ನರಿಂಗಾನ ಗ್ರಾಮದ ಕಲ್ಲರಕೋಡಿ ಎಂಬಲ್ಲಿ ವಾಸವಿದ್ದ. ಮಾ.16ರಂದು ಬೆಳ್ಮ ಗ್ರಾಮದ ನಿತ್ಯಾನಂದ ನಗರದಲ್ಲಿ ಮನೆ ಬಾಡಿಗೆ ಕೇಳುವ ನೆಪದಲ್ಲಿ ಮೂರು ಮನೆಗೆ ಹೋಗಿದ್ದಾನೆ. ಅಜ್ಜಿ ಮಾತ್ರ ಇದ್ದ ಮನೆಗೆ ಬಂದಿದ್ದ ಯುವಕ ಮುಜೀಬ್, ಮನೆ ಬಾಡಿಗೆ ಕೊಡುತ್ತೀರಾ ಎಂದು ಕೇಳಿದ್ದಾನೆ. ಇಲ್ಲಪ್ಪಾ ನಾವೇ ಬಾಡಿಗೆ ಮನೆಯಲ್ಲಿದ್ದೇವೆ. ನಾವು ಖಾಲಿ ಮಾಡಿದಾಗ ಹೇಳುತ್ತೀವಿ ಎಂದಿದ್ದಾರೆ. ಅಲ್ಲದೆ, ಆತನ ನಂಬರ್ ಬರೆದಿಡುವಂತೆ ಹೇಳಿದ್ದಾರೆ. ಇದೇ ವೇಳೆ, ನಾನೊಮ್ಮೆ ಮನೆ ಒಳಗೆ ನೋಡುತ್ತೇನೆ ಎಂದು ಒಳಗೆ ಬಂದು ಕೋಣೆ ಒಳಗೆಲ್ಲ ಸುತ್ತಾಡಿದ್ದಾನೆ.

ಇದೇ ವೇಳೆ, ಮನೆಯ ಒಳಗಿಟ್ಟಿದ್ದ ಬ್ಯಾಗಿನಲ್ಲಿದ್ದ ಎರಡು ಚಿನ್ನದ ಸರವನ್ನು ಕಳವು ಮಾಡಿದ್ದಾನೆ. ಬಳಿಕ ಅಜ್ಜಿಯಲ್ಲಿ ಮತ್ತೆ ಬರುತ್ತೇನೆ ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದ. ಮನೆಗೆ ಮರಳಿದ್ದ ಸೋದರಿಯರು, ತಪಾಸಣೆ ನಡೆಸಿದಾಗ ಮನೆಯಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿರುವುದು ಕಂಡುಬಂದಿದೆ. ಕೋಣಾಜೆ ಠಾಣೆಗೆ ವೀಣಾ ಎಂಬವರು ದೂರು ನೀಡಿದ್ದರು.
ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸಿದಾಗ, ಯುವಕನೊಬ್ಬ ಅಲ್ಲಿನ ಮೂರ್ನಾಲ್ಕು ಮನೆಗಳಿಗೆ ತೆರಳಿದ್ದು ಕಂಡುಬಂದಿದೆ. ಅಲ್ಲದೆ, ಮಾಡೂರಿನಲ್ಲೂ ಇದೇ ರೀತಿ ಕೆಲವು ಮನೆಗಳಿಗೆ ತೆರಳಿದ್ದು ಕಂಡುಬಂದಿತ್ತು. ಚಹರೆ ಆಧರಿಸಿ, ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಮೂರುವರೆ ಪವನ್ ತೂಕದ ಕರಿಮಣಿ ಸರ ಮತ್ತು ಒಂದು ಪವನ್ ತೂಕದ ಸರ ಕಳವಾಗಿತ್ತು. ಅದನ್ನು ಪೊಲೀಸರು ಆರೋಪಿಯಿಂದ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಆತನ ಬಳಿಯಿದ್ದ ಏಕ್ಟಿವಾ ಹೊಂಡಾ ವಶಕ್ಕೆ ಪಡೆದಿದ್ದಾರೆ.
police arrest thief who flee with gold from a house in Ullal at Mangalore. The arrested has been identified as Majib.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm