ಬ್ರೇಕಿಂಗ್ ನ್ಯೂಸ್
25-03-21 05:48 pm Mangaluru correspondent ಕ್ರೈಂ
ಮಂಗಳೂರು, ಮಾ.25: ಒಂದು ಕಾಲದಲ್ಲಿ ರೌಡಿಸಂ ಮಾಡಿ, ಈಗ ಉದ್ಯಮಿ ಮತ್ತು ಇಂಟಕ್ ಕಾರ್ಮಿಕ ಸಂಘಟನೆಯ ಮೂಲಕ ಕಾಂಗ್ರೆಸ್ ಮುಖಂಡನಾಗಿ ಪರಿವರ್ತನೆಯಾಗಿರುವ ರಾಕೇಶ್ ಮಲ್ಲಿ ತನಗೆ ಜೀವ ಭಯ ಇದ್ದು ಪೊಲೀಸ್ ರಕ್ಷಣೆ ನೀಡುವಂತೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ದಿ. ಮುತ್ತಪ್ಪ ರೈ ಪುತ್ರರಿಂದ ಜೀವ ಭಯ ಇದೆ. ಅಲ್ಲದೆ, ಬೆಂಗಳೂರಿನ ರೌಡಿಗಳಾದ ಒಂಟೆ ರೋಹಿತ್ ಮತ್ತು ಸೈಲಂಟ್ ಸುನೀಲ ತನ್ನನ್ನು ಕೊಲ್ಲಲು ಸಂಚು ನಡೆಸಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆಯಿಂದ ಗನ್ ಮ್ಯಾನ್ ನೀಡಬೇಕೆಂದು ಕದ್ರಿ ಠಾಣೆಯಲ್ಲಿ ಅರ್ಜಿ ನೀಡಿದ್ದಾರೆ.


ರಾಕೇಶ್ ಮಲ್ಲಿ ದೂರು ನೀಡಿರುವ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ದೃಢಪಡಿಸಿದ್ದು ಗನ್ ಮ್ಯಾನ್ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ಹಿಂದೆ ಮುತ್ತಪ್ಪ ರೈ ಜೊತೆಗೆ ಗುರುತಿಸಿಕೊಂಡಿದ್ದ ರಾಕೇಶ್ ಮಲ್ಲಿ, ರೈಯವರ ಕೊನೆಗಾಲದಲ್ಲಿ ಬೇರೆಯಾಗಿದ್ದರು. ಅಲ್ಲದೆ, ತಮ್ಮ ನಡುವೆ ನಡೆದಿರುವ ಭೂ ವ್ಯವಹಾರದಲ್ಲಿ ಮುತ್ತಪ್ಪ ರೈ ತನ್ನ ಜೊತೆ ಮುನಿಸಿಕೊಂಡಿದ್ದಾರೆ ಎಂದು ರಾಕೇಶ್ ಮಲ್ಲಿ ಹೇಳಿಕೊಂಡಿದ್ದರು.
ವರ್ಷದ ಹಿಂದೆ ಹಿಂದೆ ಮುತ್ತಪ್ಪ ರೈ ಅಸೌಖ್ಯದಿಂದ ಮೃತಪಟ್ಟಿದ್ದು ಅವರ ತೋಟ ಮನೆ ಮತ್ತು ವ್ಯವಹಾರವನ್ನು ಪುತ್ರರು ನೋಡಿಕೊಂಡಿದ್ದಾರೆ. ರಾಕಿ ಮತ್ತು ರಿಕ್ಕಿ ರೈ ಎಂಬ ಇಬ್ಬರು ಪುತ್ರರಿದ್ದು, ಅದರಲ್ಲಿ ಒಬ್ಬಾತ ವಿದೇಶದಲ್ಲಿದ್ದರೆ ರಿಕ್ಕಿ ಬೆಂಗಳೂರಿನಲ್ಲಿದ್ದುಕೊಂಡು ಹೊಟೇಲ್ ಇನ್ನಿತರ ವಹಿವಾಟು ನೋಡಿಕೊಳ್ಳುತ್ತಿದ್ದಾರೆ.
INTEC Rakesh Malli gets Life threat from Former Late Don Muthappa Rai son. Rakesh Malli seeks for Gun Man and also lodges complaint at the Kadri Police Station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am