ಬ್ರೇಕಿಂಗ್ ನ್ಯೂಸ್
30-03-21 10:47 am Mangalore Correspondent ಕ್ರೈಂ
ಕಡಬ, ಮಾ.30: ಪಾಪಿ ಸಮುದ್ರಕ್ಕೆ ಹೋದರೂ ಮೊಣಕಾಲುದ್ದ ನೀರು ಅಂತಾರಲ್ಲ. ಏಸಿಡ್ ದಾಳಿ ಪ್ರಕರಣದ ಆರೋಪಿಯೊಬ್ಬ ಸುಪ್ರೀಂ ಕೋರ್ಟ್ ಕದ ತಟ್ಟಿದರೂ, ನೆರವು ಸಿಗಲಿಲ್ಲ. ಆತ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರದ್ದುಪಡಿಸಿದ್ದಲ್ಲದೆ, ಆರೋಪಿಯನ್ನು ಬಂಧಿಸಲು ಪೊಲೀಸರಿಗೆ ಆದೇಶ ಮಾಡಿತ್ತು. ಈವರೆಗೆ ತಲೆಮರೆಸಿಕೊಂಡಿದ್ದ ಆರೋಪಿಯೇ ಸ್ವತಃ ಪೊಲೀಸರ ಮುಂದೆ ಶರಣಾಗಿದ್ದಾನೆ.
ಕಡಬದ ಕೋಡಿಂಬಾಳದಲ್ಲಿ ತನ್ನ ಸ್ವಂತ ನಾದಿನಿ ಮತ್ತು ಪುಟ್ಟ ಮಗು ಮೇಲೆ ಆ್ಯಸಿಡ್ ದಾಳಿ ನಡೆಸಿ ಕಾರಾಗ್ರಹದಲ್ಲಿದ್ದ ಆರೋಪಿ ಜಯಾನಂದರಿಗೆ ಇತ್ತೀಚೆಗೆ ಪುತ್ತೂರು ನ್ಯಾಯಾಲಯ ಜಾಮೀನು ನೀಡಿತ್ತು. ಆದರೆ ಜಾಮೀನನ್ನು ಪ್ರಶ್ನಿಸಿ ಸಂತ್ರಸ್ತ ಮಹಿಳೆ ಹೈಕೋರ್ಟಿನಲ್ಲಿ ಪ್ರಶ್ನಿಸಿ ಜಾಮೀನು ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಜಯಾನಂದರ ಜಾಮೀನು ರದ್ದುಗೊಳಿಸಿ ಅವರನ್ನು ಕೂಡಲೇ ಬಂಧಿಸುವಂತೆ ಕಡಬ ಪೊಲೀಸರಿಗೆ ಆದೇಶ ಮಾಡಿತ್ತು. ಈ ಮಧ್ಯೆ ಆರೋಪಿ ಜಯಾನಂದ ತಲೆಮರೆಸಿಕೊಂಡು ಸುಪ್ರೀಂ ಕೋರ್ಟಿನಲ್ಲಿ ನಿರೀಕ್ಷಣಾ ಜಾಮಿನಿಗೆ ಅರ್ಜಿ ಸಲ್ಲಿಸಿದ್ದ. ಆದರೆ ಈ ಅರ್ಜಿಯನ್ನು ಮಾನ್ಯ ನ್ಯಾಯಾಲಯವು ವಜಾಗೊಳಿಸಿದ್ದು, ಇದೀಗ ಜಯಾನಂದ ನ್ಯಾಯಾಲಯಕ್ಕೆ ಶರಣಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

2020ನೇ ಜನರಿ 24ರಂದು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕೊಠಾರಿ ಎಂಬಲ್ಲಿ ಜಯಾನಂದ ಎಂಬವರು ತನ್ನ ತಮ್ಮನ ಹೆಂಡತಿ ಸ್ವಪ್ನಾ ಎಂಬವರಿಗೆ ಮತ್ತು ಅವರ ಜೊತೆಗಿದ್ದ ಪುಟ್ಟ ಮಗುವಿನ ಮೇಲೆ ಆ್ಯಸಿಡ್ ಎರಚಿದ್ದ. ಇದರಿಂದ ಸ್ವಪ್ನಾ ಹಾಗೂ ಅವರ ಮಗುವಿಗೆ ಗಾಯವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಜಯಾನಂದನಿಗೆ ಪುತ್ತೂರು ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿತ್ತು. ಆದರೆ ಈ ಜಾಮೀನನ್ನು ಪ್ರಶ್ನಿಸಿ ಸ್ವಪ್ನ ಆವರು ಹೈಕೋರ್ಟಿನ ಮೊರೆ ಹೋಗಿದ್ದರು. ಈ ಮಧ್ಯೆ ಆರೋಪಿ ತಲೆಮರೆಸಿಕೊಂಡು ಸುಪ್ರೀಂ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದ ಎನ್ನಲಾಗಿದೆ. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದೀಗ ಜಯಾನಂದ ನೇರವಾಗಿ ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Supreme court rejects bail plea of acid attacker of Kadaba orders for arrest but the accused has surrendered to the Police Station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am