ಬ್ರೇಕಿಂಗ್ ನ್ಯೂಸ್
01-04-21 03:27 pm Mangalore Correspondent ಕ್ರೈಂ
ಬೆಳ್ತಂಗಡಿ, ಎ.1: ದನ ಕಳ್ಳರೆಂದು ಆರೋಪ ಹೊರಿಸಿ ಇಬ್ಬರು ಯುವಕರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ನಡೆದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ನಿನ್ನೆ ಸಂಜೆ ಕುಪ್ಪೆಟ್ಟು ನಿವಾಸಿ ಅಬ್ದುಲ್ ರಹೀಂ ಎಂಬಾತ ತನ್ನ ಪಿಕಪ್ ವಾಹನದಲ್ಲಿ ಮಹಮ್ಮದ್ ಮುಸ್ತಾಫ ಎಂಬಾತನ ಜೊತೆ ಸವಣಾಲಿಗೆ ಸಂಬಂಧಿಕರ ಮನೆಗೆ ತೆರಳಿದ್ದರು. ಅಲ್ಲಿ ರಾತ್ರಿ ಊಟ ಮುಗಿಸಿ 10.30ರ ವೇಳೆಗೆ ಮರಳುತ್ತಿದ್ದಾಗ ಸವಣಾಲು ಸಮೀಪದ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಕಚೇರಿ ಬಳಿ ಬೈಕಿನಲ್ಲಿ ಬಂದ ಇಬ್ಬರು ಪಿಕಪ್ ವಾಹನವನ್ನು ಅಡ್ಡಹಾಕಿದ್ದಾರೆ. ಇದೇ ವೇಳೆ, ಓಮ್ನಿ ಕಾರಿನಲ್ಲಿ ಮತ್ತೆ ಕೆಲವು ಯುವಕರು ಆಗಮಿಸಿದ್ದು, ಪಿಕಪ್ ವಾಹನದಲ್ಲಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ನೀವು ದನ ಕಳ್ಳರು. ರಾತ್ರಿ ವೇಳೆ ಪಿಕಪ್ ವಾಹನದಲ್ಲಿ ಎಲ್ಲಿ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡುತ್ತಾ ದೊಣ್ಣೆ ಮತ್ತು ಚಪ್ಪಲಿಯಿಂದ ಹೊಡೆದಿದ್ದಾರೆ. ಪಿಕಪ್ ವಾಹನದ ಮೇಲೂ ಹಾನಿ ಮಾಡಿದ್ದಾರೆ.

ಏಟಿನಿಂದ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ಆಬಳಿಕ ರಾತ್ರಿ ಒಬ್ಬರು ಗಮನಿಸಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹಲ್ಲೆಗೊಳಗಾದ ಅಬ್ದುಲ್ ರಹೀಂ ಹಲ್ಲೆಗೈದ ತಂಡದ ಕೆಲವರನ್ನು ಗುರುತಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ರಾಜೇಶ್ ಭಟ್, ರಾಕೇಶ್ ಭಟ್, ಗುರುಪ್ರಸಾದ್, ಲೋಕೇಶ್ ಮತ್ತು ಚಿದಾನಂದ ಎಂಬವರನ್ನು ಬಂಧಿಸಿದ್ದಾರೆ.
Mangalore Gang accuses two persons on Pick up Van of cattle trafficking attacks them brutally in Belthanagady. The police have arrested five in connection to this case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am