ಬ್ರೇಕಿಂಗ್ ನ್ಯೂಸ್
01-04-21 03:27 pm Mangalore Correspondent ಕ್ರೈಂ
ಬೆಳ್ತಂಗಡಿ, ಎ.1: ದನ ಕಳ್ಳರೆಂದು ಆರೋಪ ಹೊರಿಸಿ ಇಬ್ಬರು ಯುವಕರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ನಡೆದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ನಿನ್ನೆ ಸಂಜೆ ಕುಪ್ಪೆಟ್ಟು ನಿವಾಸಿ ಅಬ್ದುಲ್ ರಹೀಂ ಎಂಬಾತ ತನ್ನ ಪಿಕಪ್ ವಾಹನದಲ್ಲಿ ಮಹಮ್ಮದ್ ಮುಸ್ತಾಫ ಎಂಬಾತನ ಜೊತೆ ಸವಣಾಲಿಗೆ ಸಂಬಂಧಿಕರ ಮನೆಗೆ ತೆರಳಿದ್ದರು. ಅಲ್ಲಿ ರಾತ್ರಿ ಊಟ ಮುಗಿಸಿ 10.30ರ ವೇಳೆಗೆ ಮರಳುತ್ತಿದ್ದಾಗ ಸವಣಾಲು ಸಮೀಪದ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಕಚೇರಿ ಬಳಿ ಬೈಕಿನಲ್ಲಿ ಬಂದ ಇಬ್ಬರು ಪಿಕಪ್ ವಾಹನವನ್ನು ಅಡ್ಡಹಾಕಿದ್ದಾರೆ. ಇದೇ ವೇಳೆ, ಓಮ್ನಿ ಕಾರಿನಲ್ಲಿ ಮತ್ತೆ ಕೆಲವು ಯುವಕರು ಆಗಮಿಸಿದ್ದು, ಪಿಕಪ್ ವಾಹನದಲ್ಲಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ನೀವು ದನ ಕಳ್ಳರು. ರಾತ್ರಿ ವೇಳೆ ಪಿಕಪ್ ವಾಹನದಲ್ಲಿ ಎಲ್ಲಿ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡುತ್ತಾ ದೊಣ್ಣೆ ಮತ್ತು ಚಪ್ಪಲಿಯಿಂದ ಹೊಡೆದಿದ್ದಾರೆ. ಪಿಕಪ್ ವಾಹನದ ಮೇಲೂ ಹಾನಿ ಮಾಡಿದ್ದಾರೆ.

ಏಟಿನಿಂದ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ಆಬಳಿಕ ರಾತ್ರಿ ಒಬ್ಬರು ಗಮನಿಸಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹಲ್ಲೆಗೊಳಗಾದ ಅಬ್ದುಲ್ ರಹೀಂ ಹಲ್ಲೆಗೈದ ತಂಡದ ಕೆಲವರನ್ನು ಗುರುತಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ರಾಜೇಶ್ ಭಟ್, ರಾಕೇಶ್ ಭಟ್, ಗುರುಪ್ರಸಾದ್, ಲೋಕೇಶ್ ಮತ್ತು ಚಿದಾನಂದ ಎಂಬವರನ್ನು ಬಂಧಿಸಿದ್ದಾರೆ.
Mangalore Gang accuses two persons on Pick up Van of cattle trafficking attacks them brutally in Belthanagady. The police have arrested five in connection to this case.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm