ಬ್ರೇಕಿಂಗ್ ನ್ಯೂಸ್
04-04-21 09:24 am Mangaluru Correspondent ಕ್ರೈಂ
ಮಂಗಳೂರು, ಎ.4: 12 ರ ಹರೆಯದ ಬಾಲಕನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದಿದ್ದು, ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ.ರೋಡ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಕೆ.ಸಿ.ರೋಡ್ ನಿವಾಸಿ ಮೊಹಮ್ಮದ್ ಹನೀಫ್ ಎಂಬವರ ಮಗ ಆಕೀಫ್ (12) ಮೃತ ಬಾಲಕ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಆಕೀಫ್ ಪಬ್ ಜಿ ಆಡಲೆಂದು ಮನೆಯಿಂದ ಹೊರಗೆ ಹೋಗಿದ್ದ. ಆದರೆ, ಹತ್ತು ಗಂಟೆಯಾದ್ರೂ ಮನೆಗೆ ಬಂದಿಲ್ಲ ಎಂದು ಮನೆಯವರು ಹುಡುಕಾಡಿದ್ದು ಬಾಲಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ನಡೆಸಿದಾಗ, ಮನೆಯಿಂದ 500 ಮೀಟರ್ ದೂರವಿರುವ ಹುಡುಗ ಶಾಲೆ ಕಲಿಯುತ್ತಿದ್ದ ಫಲಾಹ್ ಸ್ಕೂಲಿನ ಮೈದಾನದ ಮೂಲೆಯಲ್ಲಿ ಶವ ಪತ್ತೆಯಾಗಿದೆ.

ಬಾಲಕನ ಮುಖಕ್ಕೆ ಪೆಟ್ಟು ಬಿದ್ದು ಜಜ್ಜಿದ ಸ್ಥಿತಿ ಕಂಡುಬಂದಿದೆ. ಯಾರೋ ತಲೆಯ ಭಾಗಕ್ಕೆ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ತೆರಳಿದ್ದು ಪರಿಶೀಲನೆ ನಡೆಸಿ ಆಘಾತ ವ್ಯಕ್ತಪಡಿಸಿದ್ದಾರೆ.
ಗೆಳೆಯರ ಜೊತೆ ಹುಡುಗ ಪಬ್ ಜಿ ಆಡುತ್ತಿದ್ದ ಎಂದು ಮನೆಯವರು ತಿಳಿಸಿದ್ದಾರೆ. ತಂದೆ, ಮೊಹಮ್ಮದ್ ಹನೀಫ್ ಸ್ಥಳೀಯ ಪ್ರದೀಪ್ ಎನ್ನುವ ಹುಡುಗನ ಜೊತೆ ಆಟವಾಡುತ್ತಿದ್ದ. ಆತನ ಬಗ್ಗೆ ಸಂಶಯ ಇರುವುದಾಗಿ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಆಕೀಫ್ ಪಬ್ ಜಿ ಆಟ ಆಡುತ್ತಿದ್ದನೇ ಅಥವಾ ಮಾರಣಾಂತಿಕ ಬ್ಲೂ ವೇಲ್ ಚಾಲೆಂಜ್ ಆಡುತ್ತಿದ್ದನೇ ಎನ್ನುವ ಬಗ್ಗೆ ತಿಳಿದಿಲ್ಲ. ಮನೆಯವರು ಪಬ್ ಜಿ ಆಟದ ಬಗ್ಗೆ ಹೇಳಿದ್ದಾರೆ. ಬ್ಲೂ ವೇಲ್ ಚಾಲೆಂಜಿಂಗ್ ಗೇಮ್ ಗೆಳೆಯರು ಮತ್ತು ಕಮಾಂಡಿಂಗ್ ನಡುವೆ ಆಡುವ ಆಟವಾಗಿದ್ದು ಅದರಲ್ಲಿ ತೊಡಗಿಸಿದ್ದರೇ ಅನ್ನೋದು ಗೊತ್ತಾಗಿಲ್ಲ. ಬಾಲಕ ಮೈದಾನದ ಕಾಂಪೌಂಡ್ ಗೋಡೆ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆಕ್ರೋಶ, ಉದ್ವಿಗ್ನದ ಭಾವ ಮೂಡಿಸಿದೆ.
Mangaluru Missing boy found murdered near KC Road ullal fight over PUBG game suspected. Mangalore police commissioner Shashi Kumar is in the spot investigating the case.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm