ಬ್ರೇಕಿಂಗ್ ನ್ಯೂಸ್
04-04-21 09:24 am Mangaluru Correspondent ಕ್ರೈಂ
ಮಂಗಳೂರು, ಎ.4: 12 ರ ಹರೆಯದ ಬಾಲಕನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದಿದ್ದು, ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ.ರೋಡ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಕೆ.ಸಿ.ರೋಡ್ ನಿವಾಸಿ ಮೊಹಮ್ಮದ್ ಹನೀಫ್ ಎಂಬವರ ಮಗ ಆಕೀಫ್ (12) ಮೃತ ಬಾಲಕ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಆಕೀಫ್ ಪಬ್ ಜಿ ಆಡಲೆಂದು ಮನೆಯಿಂದ ಹೊರಗೆ ಹೋಗಿದ್ದ. ಆದರೆ, ಹತ್ತು ಗಂಟೆಯಾದ್ರೂ ಮನೆಗೆ ಬಂದಿಲ್ಲ ಎಂದು ಮನೆಯವರು ಹುಡುಕಾಡಿದ್ದು ಬಾಲಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ನಡೆಸಿದಾಗ, ಮನೆಯಿಂದ 500 ಮೀಟರ್ ದೂರವಿರುವ ಹುಡುಗ ಶಾಲೆ ಕಲಿಯುತ್ತಿದ್ದ ಫಲಾಹ್ ಸ್ಕೂಲಿನ ಮೈದಾನದ ಮೂಲೆಯಲ್ಲಿ ಶವ ಪತ್ತೆಯಾಗಿದೆ.

ಬಾಲಕನ ಮುಖಕ್ಕೆ ಪೆಟ್ಟು ಬಿದ್ದು ಜಜ್ಜಿದ ಸ್ಥಿತಿ ಕಂಡುಬಂದಿದೆ. ಯಾರೋ ತಲೆಯ ಭಾಗಕ್ಕೆ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ತೆರಳಿದ್ದು ಪರಿಶೀಲನೆ ನಡೆಸಿ ಆಘಾತ ವ್ಯಕ್ತಪಡಿಸಿದ್ದಾರೆ.
ಗೆಳೆಯರ ಜೊತೆ ಹುಡುಗ ಪಬ್ ಜಿ ಆಡುತ್ತಿದ್ದ ಎಂದು ಮನೆಯವರು ತಿಳಿಸಿದ್ದಾರೆ. ತಂದೆ, ಮೊಹಮ್ಮದ್ ಹನೀಫ್ ಸ್ಥಳೀಯ ಪ್ರದೀಪ್ ಎನ್ನುವ ಹುಡುಗನ ಜೊತೆ ಆಟವಾಡುತ್ತಿದ್ದ. ಆತನ ಬಗ್ಗೆ ಸಂಶಯ ಇರುವುದಾಗಿ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಆಕೀಫ್ ಪಬ್ ಜಿ ಆಟ ಆಡುತ್ತಿದ್ದನೇ ಅಥವಾ ಮಾರಣಾಂತಿಕ ಬ್ಲೂ ವೇಲ್ ಚಾಲೆಂಜ್ ಆಡುತ್ತಿದ್ದನೇ ಎನ್ನುವ ಬಗ್ಗೆ ತಿಳಿದಿಲ್ಲ. ಮನೆಯವರು ಪಬ್ ಜಿ ಆಟದ ಬಗ್ಗೆ ಹೇಳಿದ್ದಾರೆ. ಬ್ಲೂ ವೇಲ್ ಚಾಲೆಂಜಿಂಗ್ ಗೇಮ್ ಗೆಳೆಯರು ಮತ್ತು ಕಮಾಂಡಿಂಗ್ ನಡುವೆ ಆಡುವ ಆಟವಾಗಿದ್ದು ಅದರಲ್ಲಿ ತೊಡಗಿಸಿದ್ದರೇ ಅನ್ನೋದು ಗೊತ್ತಾಗಿಲ್ಲ. ಬಾಲಕ ಮೈದಾನದ ಕಾಂಪೌಂಡ್ ಗೋಡೆ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆಕ್ರೋಶ, ಉದ್ವಿಗ್ನದ ಭಾವ ಮೂಡಿಸಿದೆ.
Mangaluru Missing boy found murdered near KC Road ullal fight over PUBG game suspected. Mangalore police commissioner Shashi Kumar is in the spot investigating the case.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm