ಬ್ರೇಕಿಂಗ್ ನ್ಯೂಸ್
04-04-21 09:24 am Mangaluru Correspondent ಕ್ರೈಂ
ಮಂಗಳೂರು, ಎ.4: 12 ರ ಹರೆಯದ ಬಾಲಕನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದಿದ್ದು, ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ.ರೋಡ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಕೆ.ಸಿ.ರೋಡ್ ನಿವಾಸಿ ಮೊಹಮ್ಮದ್ ಹನೀಫ್ ಎಂಬವರ ಮಗ ಆಕೀಫ್ (12) ಮೃತ ಬಾಲಕ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಆಕೀಫ್ ಪಬ್ ಜಿ ಆಡಲೆಂದು ಮನೆಯಿಂದ ಹೊರಗೆ ಹೋಗಿದ್ದ. ಆದರೆ, ಹತ್ತು ಗಂಟೆಯಾದ್ರೂ ಮನೆಗೆ ಬಂದಿಲ್ಲ ಎಂದು ಮನೆಯವರು ಹುಡುಕಾಡಿದ್ದು ಬಾಲಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ನಡೆಸಿದಾಗ, ಮನೆಯಿಂದ 500 ಮೀಟರ್ ದೂರವಿರುವ ಹುಡುಗ ಶಾಲೆ ಕಲಿಯುತ್ತಿದ್ದ ಫಲಾಹ್ ಸ್ಕೂಲಿನ ಮೈದಾನದ ಮೂಲೆಯಲ್ಲಿ ಶವ ಪತ್ತೆಯಾಗಿದೆ.

ಬಾಲಕನ ಮುಖಕ್ಕೆ ಪೆಟ್ಟು ಬಿದ್ದು ಜಜ್ಜಿದ ಸ್ಥಿತಿ ಕಂಡುಬಂದಿದೆ. ಯಾರೋ ತಲೆಯ ಭಾಗಕ್ಕೆ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ತೆರಳಿದ್ದು ಪರಿಶೀಲನೆ ನಡೆಸಿ ಆಘಾತ ವ್ಯಕ್ತಪಡಿಸಿದ್ದಾರೆ.
ಗೆಳೆಯರ ಜೊತೆ ಹುಡುಗ ಪಬ್ ಜಿ ಆಡುತ್ತಿದ್ದ ಎಂದು ಮನೆಯವರು ತಿಳಿಸಿದ್ದಾರೆ. ತಂದೆ, ಮೊಹಮ್ಮದ್ ಹನೀಫ್ ಸ್ಥಳೀಯ ಪ್ರದೀಪ್ ಎನ್ನುವ ಹುಡುಗನ ಜೊತೆ ಆಟವಾಡುತ್ತಿದ್ದ. ಆತನ ಬಗ್ಗೆ ಸಂಶಯ ಇರುವುದಾಗಿ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಆಕೀಫ್ ಪಬ್ ಜಿ ಆಟ ಆಡುತ್ತಿದ್ದನೇ ಅಥವಾ ಮಾರಣಾಂತಿಕ ಬ್ಲೂ ವೇಲ್ ಚಾಲೆಂಜ್ ಆಡುತ್ತಿದ್ದನೇ ಎನ್ನುವ ಬಗ್ಗೆ ತಿಳಿದಿಲ್ಲ. ಮನೆಯವರು ಪಬ್ ಜಿ ಆಟದ ಬಗ್ಗೆ ಹೇಳಿದ್ದಾರೆ. ಬ್ಲೂ ವೇಲ್ ಚಾಲೆಂಜಿಂಗ್ ಗೇಮ್ ಗೆಳೆಯರು ಮತ್ತು ಕಮಾಂಡಿಂಗ್ ನಡುವೆ ಆಡುವ ಆಟವಾಗಿದ್ದು ಅದರಲ್ಲಿ ತೊಡಗಿಸಿದ್ದರೇ ಅನ್ನೋದು ಗೊತ್ತಾಗಿಲ್ಲ. ಬಾಲಕ ಮೈದಾನದ ಕಾಂಪೌಂಡ್ ಗೋಡೆ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆಕ್ರೋಶ, ಉದ್ವಿಗ್ನದ ಭಾವ ಮೂಡಿಸಿದೆ.
Mangaluru Missing boy found murdered near KC Road ullal fight over PUBG game suspected. Mangalore police commissioner Shashi Kumar is in the spot investigating the case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am