ಬ್ರೇಕಿಂಗ್ ನ್ಯೂಸ್
07-04-21 04:32 pm Headline Karnataka News Network ಕ್ರೈಂ
ಬೆಂಗಳೂರು, ಎ.7: ಗಂಡ- ಹೆಂಡತಿ ಜಗಳದಲ್ಲಿ ತಂದೆಯ ಪರ ನಿಲ್ಲುತ್ತಾಳೆಂಬ ಕೋಪದಲ್ಲಿ ತಾಯಿಯೇ ತನ್ನ ಮೂರು ವರ್ಷದ ಕಂದಮ್ಮನನ್ನು ಕತ್ತು ಹಿಸುಕಿ ಕೊಲೆಗೈದ ಅಮಾನವೀಯ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಮಲ್ಲತಹಳ್ಳಿಯ ಈರಣ್ಣ ಎಂಬವರ ಪುತ್ರಿ ಮೂರು ವರ್ಷದ ವಿನುತಾ ಮೃತ ಮಗು. ಮಗಳನ್ನು ಕೊಂದ ತಾಯಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ. ಈರಣ್ಣ ಹಾಗೂ ಸುಧಾ ಮಲ್ಲತಹಳ್ಳಿಯ ಫ್ಲಾಟ್ ಒಂದರಲ್ಲಿ ವಾಸವಿದ್ದರು. ಈರಣ್ಣ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸುಧಾ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು. ರಾತ್ರಿ ಮನೆಯಲ್ಲಿ ಟಿವಿ ನೋಡುವ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿದ್ದು, ವಿನುತಾ ತಂದೆಯ ಪರ ನಿಂತಿದ್ದಾಳೆ.
ತಂದೆ ನ್ಯೂಸ್ ನೋಡುತ್ತಿದ್ದುದಕ್ಕೆ ಮಗಳು ವಿನುತಾ ಕೂಡ ದನಿಗೂಡಿಸಿದ್ದು, ತಂದೆಗೆ ಬೇಕಾದ ಚಾನೆಲ್ ಇಡುವಂತೆ ಹೇಳಿದ್ದಾಳೆ. ಹೀಗೆ ಅನೇಕ ವಿಚಾರದಲ್ಲಿ ಮಗಳು ತಂದೆ ಪರ ನಿಂತಿದ್ದರಿಂದ ಕೋಪಗೊಂಡಿದ್ದ ತಾಯಿ ಸುಧಾ ಮಂಗಳವಾರ ಸಂಜೆ ಮಗಳನ್ನು ಗೋಬಿ ಮಂಚೂರಿ ಕೊಡಿಸುವುದಾಗಿ ಹೇಳಿ ಬೇರೆ ಕಡೆಗೆ ಕರೆದೊಯ್ದಿದ್ದಾಳೆ.
ನಂತರ ನಿರ್ಮಾಣ ಹಂತದ ಕಟ್ಟಡದ ಬಳಿಗೆ ಕರೆದೊಯ್ದು ವೈಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಪತಿಯ ಬಳಿ ಹೇಳಿದ್ದಾಳೆ. ಈ ಬಗ್ಗೆ ಈರಣ್ಣ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ ಇಂದು ಬೆಳಗ್ಗೆ ಮಗುವಿನ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸಂಶಯದ ಮೇರೆಗೆ ತಾಯಿ ಸುಧಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾಳೆ.
In a shocking incident, a three-year-old girl was killed by her own mother for supporting her father during a quarrel.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm