ಬ್ರೇಕಿಂಗ್ ನ್ಯೂಸ್
07-04-21 04:32 pm Headline Karnataka News Network ಕ್ರೈಂ
ಬೆಂಗಳೂರು, ಎ.7: ಗಂಡ- ಹೆಂಡತಿ ಜಗಳದಲ್ಲಿ ತಂದೆಯ ಪರ ನಿಲ್ಲುತ್ತಾಳೆಂಬ ಕೋಪದಲ್ಲಿ ತಾಯಿಯೇ ತನ್ನ ಮೂರು ವರ್ಷದ ಕಂದಮ್ಮನನ್ನು ಕತ್ತು ಹಿಸುಕಿ ಕೊಲೆಗೈದ ಅಮಾನವೀಯ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಮಲ್ಲತಹಳ್ಳಿಯ ಈರಣ್ಣ ಎಂಬವರ ಪುತ್ರಿ ಮೂರು ವರ್ಷದ ವಿನುತಾ ಮೃತ ಮಗು. ಮಗಳನ್ನು ಕೊಂದ ತಾಯಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ. ಈರಣ್ಣ ಹಾಗೂ ಸುಧಾ ಮಲ್ಲತಹಳ್ಳಿಯ ಫ್ಲಾಟ್ ಒಂದರಲ್ಲಿ ವಾಸವಿದ್ದರು. ಈರಣ್ಣ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸುಧಾ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು. ರಾತ್ರಿ ಮನೆಯಲ್ಲಿ ಟಿವಿ ನೋಡುವ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿದ್ದು, ವಿನುತಾ ತಂದೆಯ ಪರ ನಿಂತಿದ್ದಾಳೆ.
ತಂದೆ ನ್ಯೂಸ್ ನೋಡುತ್ತಿದ್ದುದಕ್ಕೆ ಮಗಳು ವಿನುತಾ ಕೂಡ ದನಿಗೂಡಿಸಿದ್ದು, ತಂದೆಗೆ ಬೇಕಾದ ಚಾನೆಲ್ ಇಡುವಂತೆ ಹೇಳಿದ್ದಾಳೆ. ಹೀಗೆ ಅನೇಕ ವಿಚಾರದಲ್ಲಿ ಮಗಳು ತಂದೆ ಪರ ನಿಂತಿದ್ದರಿಂದ ಕೋಪಗೊಂಡಿದ್ದ ತಾಯಿ ಸುಧಾ ಮಂಗಳವಾರ ಸಂಜೆ ಮಗಳನ್ನು ಗೋಬಿ ಮಂಚೂರಿ ಕೊಡಿಸುವುದಾಗಿ ಹೇಳಿ ಬೇರೆ ಕಡೆಗೆ ಕರೆದೊಯ್ದಿದ್ದಾಳೆ.
ನಂತರ ನಿರ್ಮಾಣ ಹಂತದ ಕಟ್ಟಡದ ಬಳಿಗೆ ಕರೆದೊಯ್ದು ವೈಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಪತಿಯ ಬಳಿ ಹೇಳಿದ್ದಾಳೆ. ಈ ಬಗ್ಗೆ ಈರಣ್ಣ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ ಇಂದು ಬೆಳಗ್ಗೆ ಮಗುವಿನ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸಂಶಯದ ಮೇರೆಗೆ ತಾಯಿ ಸುಧಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾಳೆ.
In a shocking incident, a three-year-old girl was killed by her own mother for supporting her father during a quarrel.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am