ಬ್ರೇಕಿಂಗ್ ನ್ಯೂಸ್
07-04-21 04:32 pm Headline Karnataka News Network ಕ್ರೈಂ
ಬೆಂಗಳೂರು, ಎ.7: ಗಂಡ- ಹೆಂಡತಿ ಜಗಳದಲ್ಲಿ ತಂದೆಯ ಪರ ನಿಲ್ಲುತ್ತಾಳೆಂಬ ಕೋಪದಲ್ಲಿ ತಾಯಿಯೇ ತನ್ನ ಮೂರು ವರ್ಷದ ಕಂದಮ್ಮನನ್ನು ಕತ್ತು ಹಿಸುಕಿ ಕೊಲೆಗೈದ ಅಮಾನವೀಯ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಮಲ್ಲತಹಳ್ಳಿಯ ಈರಣ್ಣ ಎಂಬವರ ಪುತ್ರಿ ಮೂರು ವರ್ಷದ ವಿನುತಾ ಮೃತ ಮಗು. ಮಗಳನ್ನು ಕೊಂದ ತಾಯಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ. ಈರಣ್ಣ ಹಾಗೂ ಸುಧಾ ಮಲ್ಲತಹಳ್ಳಿಯ ಫ್ಲಾಟ್ ಒಂದರಲ್ಲಿ ವಾಸವಿದ್ದರು. ಈರಣ್ಣ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸುಧಾ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು. ರಾತ್ರಿ ಮನೆಯಲ್ಲಿ ಟಿವಿ ನೋಡುವ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿದ್ದು, ವಿನುತಾ ತಂದೆಯ ಪರ ನಿಂತಿದ್ದಾಳೆ.
ತಂದೆ ನ್ಯೂಸ್ ನೋಡುತ್ತಿದ್ದುದಕ್ಕೆ ಮಗಳು ವಿನುತಾ ಕೂಡ ದನಿಗೂಡಿಸಿದ್ದು, ತಂದೆಗೆ ಬೇಕಾದ ಚಾನೆಲ್ ಇಡುವಂತೆ ಹೇಳಿದ್ದಾಳೆ. ಹೀಗೆ ಅನೇಕ ವಿಚಾರದಲ್ಲಿ ಮಗಳು ತಂದೆ ಪರ ನಿಂತಿದ್ದರಿಂದ ಕೋಪಗೊಂಡಿದ್ದ ತಾಯಿ ಸುಧಾ ಮಂಗಳವಾರ ಸಂಜೆ ಮಗಳನ್ನು ಗೋಬಿ ಮಂಚೂರಿ ಕೊಡಿಸುವುದಾಗಿ ಹೇಳಿ ಬೇರೆ ಕಡೆಗೆ ಕರೆದೊಯ್ದಿದ್ದಾಳೆ.
ನಂತರ ನಿರ್ಮಾಣ ಹಂತದ ಕಟ್ಟಡದ ಬಳಿಗೆ ಕರೆದೊಯ್ದು ವೈಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಪತಿಯ ಬಳಿ ಹೇಳಿದ್ದಾಳೆ. ಈ ಬಗ್ಗೆ ಈರಣ್ಣ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ ಇಂದು ಬೆಳಗ್ಗೆ ಮಗುವಿನ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸಂಶಯದ ಮೇರೆಗೆ ತಾಯಿ ಸುಧಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾಳೆ.
In a shocking incident, a three-year-old girl was killed by her own mother for supporting her father during a quarrel.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm