ಬ್ರೇಕಿಂಗ್ ನ್ಯೂಸ್
07-04-21 04:32 pm Headline Karnataka News Network ಕ್ರೈಂ
ಬೆಂಗಳೂರು, ಎ.7: ಗಂಡ- ಹೆಂಡತಿ ಜಗಳದಲ್ಲಿ ತಂದೆಯ ಪರ ನಿಲ್ಲುತ್ತಾಳೆಂಬ ಕೋಪದಲ್ಲಿ ತಾಯಿಯೇ ತನ್ನ ಮೂರು ವರ್ಷದ ಕಂದಮ್ಮನನ್ನು ಕತ್ತು ಹಿಸುಕಿ ಕೊಲೆಗೈದ ಅಮಾನವೀಯ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಮಲ್ಲತಹಳ್ಳಿಯ ಈರಣ್ಣ ಎಂಬವರ ಪುತ್ರಿ ಮೂರು ವರ್ಷದ ವಿನುತಾ ಮೃತ ಮಗು. ಮಗಳನ್ನು ಕೊಂದ ತಾಯಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ. ಈರಣ್ಣ ಹಾಗೂ ಸುಧಾ ಮಲ್ಲತಹಳ್ಳಿಯ ಫ್ಲಾಟ್ ಒಂದರಲ್ಲಿ ವಾಸವಿದ್ದರು. ಈರಣ್ಣ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸುಧಾ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು. ರಾತ್ರಿ ಮನೆಯಲ್ಲಿ ಟಿವಿ ನೋಡುವ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿದ್ದು, ವಿನುತಾ ತಂದೆಯ ಪರ ನಿಂತಿದ್ದಾಳೆ.
ತಂದೆ ನ್ಯೂಸ್ ನೋಡುತ್ತಿದ್ದುದಕ್ಕೆ ಮಗಳು ವಿನುತಾ ಕೂಡ ದನಿಗೂಡಿಸಿದ್ದು, ತಂದೆಗೆ ಬೇಕಾದ ಚಾನೆಲ್ ಇಡುವಂತೆ ಹೇಳಿದ್ದಾಳೆ. ಹೀಗೆ ಅನೇಕ ವಿಚಾರದಲ್ಲಿ ಮಗಳು ತಂದೆ ಪರ ನಿಂತಿದ್ದರಿಂದ ಕೋಪಗೊಂಡಿದ್ದ ತಾಯಿ ಸುಧಾ ಮಂಗಳವಾರ ಸಂಜೆ ಮಗಳನ್ನು ಗೋಬಿ ಮಂಚೂರಿ ಕೊಡಿಸುವುದಾಗಿ ಹೇಳಿ ಬೇರೆ ಕಡೆಗೆ ಕರೆದೊಯ್ದಿದ್ದಾಳೆ.
ನಂತರ ನಿರ್ಮಾಣ ಹಂತದ ಕಟ್ಟಡದ ಬಳಿಗೆ ಕರೆದೊಯ್ದು ವೈಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಪತಿಯ ಬಳಿ ಹೇಳಿದ್ದಾಳೆ. ಈ ಬಗ್ಗೆ ಈರಣ್ಣ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ ಇಂದು ಬೆಳಗ್ಗೆ ಮಗುವಿನ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸಂಶಯದ ಮೇರೆಗೆ ತಾಯಿ ಸುಧಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾಳೆ.
In a shocking incident, a three-year-old girl was killed by her own mother for supporting her father during a quarrel.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm