ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಕೇಜಿ ಗಾಂಜಾ ಸಹಿತ ಆರೋಪಿ ಸೆರೆ, ಇನ್ನಿಬ್ಬರು ಪರಾರಿ

08-04-21 12:08 pm       Mangalore Correspondent   ಕ್ರೈಂ

ಕಾರಿನಲ್ಲಿ ಸಾಗಿಸುತ್ತಿದ್ದ 2 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದ ವಿಟ್ಲ ಪೊಲೀಸರು ನಾಸೀರ್ ಎಂಬಾತನನ್ನು ಬಂಧಿಸಿದ್ದಾರೆ.

ಬಂಟ್ವಾಳ, ಎ.8 : ಇಲ್ಲಿನ ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದ ವಿಟ್ಲ ಪೊಲೀಸರು ನಾಸೀರ್ ಎಂಬಾತನನ್ನು ಬಂಧಿಸಿದ್ದಾರೆ.

ಈ ವೇಳೆ ಪ್ರಮುಖ ಆರೋಪಿಗಳಾದ ಬಾಕ್ರಬೈಲಿನ ಬಾರಿಕ್ ಹಾಗೂ ಪಾತೂರಿನ ಮುಸ್ತಫ ತಲೆಮರೆಸಿಕೊಂಡಿದ್ದು, ಪೊಲೀಸರು ಪತ್ತೆ ಕಾರ್ಯ ಮುಂದುವರಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣೆ ಪಿಎಸ್ಐ ವಿನೋದ್ ಎಸ್.ಕೆ. ಅವರು ಸಿಬ್ಬಂದಿ ಪ್ರಸನ್ನ , ಜಯರಾಮ ಕೆ.ಟಿ., ಪ್ರತಾಪ್ ರೆಡ್ಡಿ, ಲೋಕೇಶ, ಹೇಮರಾಜ್ ಹಾಗೂ ವಿನಾಯಕ ಜೊತೆ ಕಾರ್ಯಾಚರಣೆ ನಡೆಸಿದ್ದಾರೆ. 

ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ 2 ಕೆ.ಜಿ. ತೂಕದ 20 ಸಾವಿರ ರೂ. ಬೆಲೆಯ ಗಾಂಜಾ ಕಾರಿನಲ್ಲಿ ಪತ್ತೆಯಾಗಿದೆ. ಕಾರು ಸಹಿತ ಅದರಲ್ಲಿದ್ದ ಮಂಜೇಶ್ವರ ತಾಲೂಕಿನ ಪಾತೂರು ಕಜೆ ನಿವಾಸಿ ನಾಸಿರ್ ಎಂಬಾತನನ್ನು ಬಂಧಿಸಿದ್ದಾರೆ. ಈತನನ್ನು ಮಂಗಳೂರು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು , ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Bantwal Man arrested for illegal smuggling 2 kilo ganja in car. The arrested has been identified as Nasir.