ಬ್ರೇಕಿಂಗ್ ನ್ಯೂಸ್
09-04-21 11:33 am Mangalore Correspondent ಕ್ರೈಂ
ಉಳ್ಳಾಲ, ಎ.9: ಕೇರಳ ರಾಜ್ಯದ ಭಾಗ್ಯಮಿತ್ರ ತಿಂಗಳ ಬಂಪರ್ ಒಂದು ಕೋಟಿ ರೂಪಾಯಿ ಬಹುಮಾನವನ್ನು ಗಿಟ್ಟಿಸಿಕೊಂಡಿರುವುದಾಗಿ ಎಲ್ಲರನ್ನು ನಂಬಿಸಿ ಮಾಧ್ಯಮಗಳಲ್ಲಿ ಪುಕ್ಕಟೆ ಪ್ರಚಾರ ಪಡೆದ ವಾಚ್ ಮನ್ ಮೊಯ್ದಿನ್ ಕುಟ್ಟಿ ದಿಢೀರ್ ನಾಪತ್ತೆಯಾಗಿದ್ದಾನೆ.

ಮೂಲತಃ ಕೇರಳದ ಕ್ಯಾಲಿಕಟ್ ನಿವಾಸಿ ಮೊಯ್ದಿನ್ ಕುಟ್ಟಿ (65) ಕೋಟಿ ಲಾಟರಿಯ ಸುಳ್ಳು ಕತೆ ಕಟ್ಟಿ ಸಾಲದಾತರ ಹಿಡಿಶಾಪಕ್ಕೆ ಗುರಿಯಾಗಿದ್ದಾರೆ. ತೊಕ್ಕೊಟ್ಟಿನ ಸ್ಮಾರ್ಟ್ ಪ್ಲಾನೆಟ್ ಸಂಕೀರ್ಣದ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಟ್ಟಿ ಕಳೆದ ಎಪ್ರಿಲ್ 4 ರಂದು ಡ್ರಾಗೊಳ್ಳುವ ಭಾಗ್ಯಮಿತ್ರ ಲಾಟರಿಯನ್ನು 100 ರೂಪಾಯಿ ಕೊಟ್ಟು ಖರೀದಿಸಿದ್ದರು. ಎ.4 ರಂದು ಡ್ರಾ ಆದ ಭಾಗ್ಯಮಿತ್ರ ಲಾಟರಿಯ ವಿಜೇತ ನಂಬರನ್ನು( BJ 134048 ) ಆನ್ ಲೈನ್ ನಲ್ಲಿ ತಿಳಿದ ಕುಟ್ಟಿ, ಆ ನಂಬರಿನ ಪ್ರಿಂಟ್ ಔಟ್ ತೆಗೆದು ತಾನು ಖರೀದಿಸಿದ ಲಾಟರಿಗೆ ಅಂಟಿಸಿ ಪೊಟೋ ಪ್ರಿಂಟ್ ಮಾಡಿಸಿ ತನಗೆ ಕೋಟಿ ಬಹುಮಾನ ಬಂದಿರುವುದಾಗಿ ತನ್ನ ಆಪ್ತರನ್ನು ನಂಬಿಸಿದ್ದಾರೆ. ಲಾಟರಿಯ ಅಸಲಿ ಪ್ರತಿಯನ್ನು ಲಾಟರಿ ಏಜೆನ್ಸಿಗೆ ಸರೆಂಡರ್ ಮಾಡಿದ್ದು ಮೂರು ತಿಂಗಳ ಒಳಗೆ ತನ್ನ ಖಾತೆಗೆ ಹಣ ಬರುವುದಾಗಿ ಎಲ್ಲರನ್ನೂ ಕುಟ್ಟಿ ನಂಬಿಸಿದ್ದಾರೆ.

ವಾಚ್ ಮೆನ್ ಕುಟ್ಟಿ ಟಿಕೇಟ್ ಖರೀದಿಸಲೆಂದು ತಾನು ಕೆಲಸ ನಿರ್ವಹಿಸುತ್ತಿದ್ದ ಕಟ್ಟಡದಲ್ಲಿರುವ ಟೈಲರ್ ಓರ್ವರಲ್ಲಿ 500 ರೂಪಾಯಿ ಸಾಲ ಪಡೆದಿದ್ದರು. ಕುಟ್ಟಿಗೆ ಲಾಟರಿ ಹೊಡೆದಿರುವ ವಿಷಯ ತಿಳಿದು ಟೈಲರ್ ಸೇರಿ ಕಟ್ಟಡದ ವರ್ತಕರೆಲ್ಲರೂ ಸಂಭ್ರಮಿಸಿದ್ದರು.

ಸ್ಮಾರ್ಟ್ ಪ್ಲಾನೆಟ್ ಕಟ್ಟಡದಲ್ಲಿ ಕೆಲಸ ನಿರ್ವಹಿಸಿ ಅಲ್ಲೇ ತಂಗಿರುವ ಕುಟ್ಟಿ ಸ್ಥಳೀಯ ಹಲವರಲ್ಲಿ ಕೈ ಸಾಲ ಮಾಡಿದ್ದು ಅದನ್ನು ಮರೆ ಮಾಚಲು ಲಾಟರಿ ಹೊಡೆದಿರುವ ಬಗ್ಗೆ ಸುಳ್ಳು ಕಥೆ ಸೃಷ್ಟಿಸಿದ್ದಾರೆಂದು ತಿಳಿದು ಬಂದಿದೆ. ಲಾಟರಿ ಹೊಡೆದಿದನ್ನ ನಂಬಿ ಇನ್ನಷ್ಟು ಮಂದಿ ಈತನಿಗೆ ಹಣ ಸಾಲ ನೀಡಿದ್ದಾರಂತೆ. ಇಂದು ಬೆಳಗ್ಗೆ ಕಟ್ಟಡ ನಿವಾಸಿಗಳಿಗೆ ಲಾಟರಿ ವಿಷಯ ಸುಳ್ಳೆಂದು ತಿಳಿಯುತ್ತಿದ್ದಂತೆ ಕುಟ್ಟಿ ಬಳಿ ವಿಚಾರಿಸಲು ತೆರಳಿದಾಗ ಆತ ಪರಾರಿಯಾಗಿದ್ದಾನೆ. ಸಾಲ ಕೊಟ್ಟವರು, ಕೋಟಿ ಸಿಕ್ಕಿದೆಯೆಂದು ಸಂಭ್ರಮಿಸಿದವರು ಬೇಸ್ತು ಬಿದ್ದಿದ್ದಾರೆ.
Read : ತೊಕ್ಕೊಟ್ಟು ; ಸೆಕ್ಯುರಿಟಿಗೆ ಒಲಿದ ಭಾಗ್ಯಮಿತ್ರ !! ಬಡಪಾಯಿಗೆ ಒಂದು ಕೋಟಿ ಕೇರಳ ಲಾಟರಿ ಬಂಪರ್ !
Ullal a Security guard who was told that he has won the One crore Kerala lottery was fake as he edited the ticket in the cyber. He's said to be absconding.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm