ಬ್ರೇಕಿಂಗ್ ನ್ಯೂಸ್
09-04-21 05:47 pm Bangalore Correspondent ಕ್ರೈಂ
ಬೆಂಗಳೂರು, ಏ 9 : ಚಾಕು, ಪೇಪರ್ ಕಟ್ಟರ್, ರೇಜರ್ ಇತರ ಹರಿತ ವಸ್ತುಗಳನ್ನು ಕಾಲಿನ ಮಣಿಗಂಟಿನ ಬಳಿ ಅಡಗಿಸಿಕೊಂಡಿದ್ದ 26 ವರ್ಷದ ಗರ್ಭಿಣಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಅಧಿಕಾರಿಗಳು ಬಂಧಿಸಿದ್ದಾರೆ.
ಯುವತಿಯನ್ನು ಅಸ್ಸಾಂ ಮೂಲದ ಉಮಾದೇವಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 7.10 ಕ್ಕೆ ಬೆಂಗಳೂರಿನಿಂದ ಗುವಾಹಟಿಗೆ ತೆರಳುವ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಲು ಸಿದ್ಧತೆ ನಡೆಸಿದ್ದಳು. ದೇವಿ ಮತ್ತು ಆಕೆಯ ನಾಲ್ಕು ಕುಟುಂಬ ಸದಸ್ಯರು ತಪಾಸಣೆಗಾಗಿ ಮುಂಜಾನೆ 5.30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಗರ್ಭಿಣಿಯ ನಡವಳಿಕೆ ಕಂಡು ಸಿಐಎಸ್ಎಫ್ ಅಧಿಕಾರಿಗಳು ಅನುಮಾನದಿಂದ ತಪಾಸಣೆ ತೀವ್ರಗೊಳಿಸಿದಾಗ ಆಕೆಯ ಎಡಕಾಲಿನ ಪಾದದ ಬಳಿ ಹರಿತವಾದ ವಸ್ತುಗಳಾದ ಪೇಪರ್ ಕಟ್ಟರ್, ಚಾಕು ,ಸಿಂಗಲ್ ಬ್ಲೇಡ್, ರೇಜರ್, ನೇಲ್ಕ್ಲಿಪ್ಪರ್, ಮೆಟಲ್ ಫೈಲರ್, ಇಕ್ಕಳ ಕಟ್ಟಿಕೊಂಡಿರುವುದು ಬೆಳಕಿಗೆ ಬಂದಿದೆ.

ಆಕೆಯನ್ನು ವಿಚಾರಣೆ ನಡೆಸಿದಾಗ "ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದು, ನಮ್ಮ ಸಮುದಾಯದಲ್ಲಿ ಗರ್ಭಿಣಿಯರು ಹೊಟ್ಟೆಯ ಸುತ್ತಲೂ ಲೋಹದ ವಸ್ತುಗಳನ್ನು ಕಟ್ಟುವುದು ಸಂಪ್ರದಾಯ. ಹೊಟ್ಟೆಯ ಭಾಗಕ್ಕೆ ಕಟ್ಟಲು ಆತಂಕವಾಗಿ ತನ್ನ ಪಾದದ ಬಳಿ ಕಟ್ಟಿಕೊಂಡಿರುವುದಾಗಿ ತಿಳಿಸಿದ್ದಾಳೆ. ತಪಾಸಣೆ ವೇಳೆ ಅಧಿಕಾರಿಗಳು ತಕ್ಷಣ ಇಂಡಿಗೋ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಹೆಚ್ಚುವರಿ ಪರಿಶೀಲನೆಗಾಗಿ ವಿಮಾನದಲ್ಲಿ ಕುಳಿತಿದ್ದ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಪತಿ ಸೇರಿದಂತೆ ಆಕೆಯ ಕುಟುಂಬಸ್ಥರು ಹಾಗೂ ಅವರ ಲಗೇಜ್ ಗಳನ್ನು ವಿಮಾನದಿಂದ ಇಳಿಸಿದ್ದಾರೆ.
ಶಂಕಿತೆ ಗರ್ಭಿಣಿ ವಿಮಾನದಲ್ಲಿ ಕಾಕ್ಪಿಟ್ಗೆ ಸಮೀಪವಿರುವ ಸೀಟ್ ನಂಬರ್ 1 ಎ ಬುಕ್ ಮಾಡಿರುವುದು ಅನುಮಾನಕ್ಕೆ ಕಾರಣವಾಗಿತ್ತು. ಹೀಗಾಗಿ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಪೊಲೀಸರಿಗೆ ಹಸ್ತಾಂತರಿಸಿದ್ದು ಆಕೆಯನ್ನು ಹಾಗೂ ಆಕೆಯ ಸಮುದಾಯ ಪದ್ಧತಿಯ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ.
A 26-year-old pregnant woman passenger with a knife, paper cutter, razor and other sharp objects strapped to her ankle with duct tape, was arrested at the Kempegowda International Airport on Thursday.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm