ಬ್ರೇಕಿಂಗ್ ನ್ಯೂಸ್
09-04-21 10:15 pm Headline Karnataka News Network ಕ್ರೈಂ
ಬೆಂಗಳೂರು, ಎ.9 : ರಕ್ಷಿತ್ ಶೆಟ್ಟಿ - ರಶ್ಮಿಕಾ ಮಂದಣ್ಣ ನಟನೆಯ ಸೂಪರ್ ಹಿಟ್ ಚಿತ್ರ ಕಿರಿಕ್ ಪಾರ್ಟಿ. ಆದರೆ, ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಕಿರಿಕ್ ಪಾರ್ಟಿ ಚಿತ್ರತಂಡಕ್ಕೇ ಈಗ ಸಂಕಷ್ಟ ಎದುರಾಗಿದೆ. ಇಡೀ ಸಿನಿಮಾ ತಂಡದ ವಿರುದ್ಧ ಬೆಂಗಳೂರಿನ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
ಬೆಂಗಳೂರಿನ 9ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ಆರೋಪಿತರನ್ನು ಬಂಧಿಸಿ ಕರೆತರುವಂತೆ ಕೋರ್ಟ್ ಸೂಚಿಸಿದೆ. ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ರಿಷಬ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ ಸ್ಟುಡಿಯೋಸ್ ಆರೋಪಿಗಳಾಗಿದ್ದು ಬಂಧನ ವಾರೆಂಟ್ ಜಾರಿಯಾಗಿದೆ. ಲಹರಿ ಸಂಸ್ಥೆಯಿಂದ ಇವರ ವಿರುದ್ಧ ದೂರು ನೀಡಿದ್ದು ಅನುಮತಿ ಇಲ್ಲದೆ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ತಮ್ಮ ಹಾಡನ್ನು ಅಕ್ರಮವಾಗಿ ಬಳಸಿಕೊಂಡಿದ್ದಾಗಿ ಆರೋಪಿಸಿ ದೂರು ನೀಡಿತ್ತು.

2016ರಲ್ಲಿ ಲಹರಿ ಸಂಸ್ಥೆ ಕಾಪಿ ರೈಟ್ ಆಕ್ಟ್ ಅಡಿ ದೂರು ದಾಖಲು ಮಾಡಿತ್ತು. ಸಿನಿಮಾ ಬಿಡುಗಡೆಯಾಗಿ 5 ವರ್ಷಗಳ ಬಳಿಕ ವಿಚಾರಣೆ ನಡೆದು ಈಗ ವಾರೆಂಟ್ ಜಾರಿಯಾಗಿದೆ.
ಒಟ್ಟು ತಂಡದ ವಿರುದ್ಧ 8 ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿತ್ತು. ಆದರೆ ಆರೋಪಿಗಳು ಒಮ್ಮೆಯೂ ಕೋರ್ಟ್ ಗೆ ಹಾಜರಾಗದ ಕಾರಣಕ್ಕೆ ಈ ಬಾರಿ ಬಂಧಿಸಿ ಕರೆತರುವಂತೆ ಕೋರ್ಟ್ ಆದೇಶ ನೀಡಿದೆ. ಮೇ 27ಕ್ಕೆ ಕೋರ್ಟ್ ಮುಂದೆ ಹಾಜರು ಪಡಿಸಲು ಪೊಲೀಸರಿಗೆ ಸೂಚನೆ ನೀಡಿದೆ.

ಕಿರಿಕ್ ಪಾರ್ಟಿ ಸಿನಿಮಾದಲ್ಲಿ ರವಿಚಂದ್ರನ್ ನಟನೆಯ ಶಾಂತಿ ಕ್ರಾಂತಿ ಚಿತ್ರದ ಮಧ್ಯರಾತ್ರೀಲಿ ಹಾಡನ್ನು ಬಳಸಿಕೊಳ್ಳಲಾಗಿದೆ ಎಂದು ಲಹರಿ ಸಂಸ್ಥೆ ಮುಖ್ಯಸ್ಥ ಲಹರಿ ವೇಲು ದೂರು ದಾಖಲಿದ್ದರು.
Rishab Shetty’s ‘Kirik Party’ starring Simple Star Rakshit Shetty is back in trouble. The court has issued a non-bailable warrant against the film. The 9th ACMM Court in Bangalore has issued a non-bailable warrant and ordered the arrest. Actor Rakshit Shetty, director Rishab Shetty, music director Ajanesh Lokanath and Paramwa Studios are accused. He was accused of illegally using the song in Kirk Party Cinema without permission from a drug agency.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm