ಬ್ರೇಕಿಂಗ್ ನ್ಯೂಸ್
10-04-21 06:10 pm Headline Karnataka News Network ಕ್ರೈಂ
ಬೆಂಗಳೂರು, ಎ.10: ಬೆಂಗಳೂರಿನ ಎರಡು ಕುಖ್ಯಾತ ಗ್ಯಾಂಗ್ ಸ್ಟರ್ ಗಳ ನಡುವೆ ಆಗುತ್ತಿದ್ದ ಗ್ಯಾಂಗ್ ವಾರನ್ನು ಸಿಸಿಬಿ ಪೊಲೀಸರು ಸಕಾಲಿಕ ಕಾರ್ಯಾಚರಣೆಯಿಂದ ತಪ್ಪಿಸಿದ್ದಾರೆ. ಒಂಟೆ ರೋಹಿತ ಎಂದೇ ಹೆಸರು ಗಳಿಸಿರುವ ಕಾಡುಬಿಸನಹಳ್ಳಿಯ ರೌಡಿ ರೋಹಿತ್ ಗೌಡ ಮತ್ತು ಆತನ 11 ಮಂದಿ ರೌಡಿ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.
ಬಾಗಲಗುಂಟೆ ಠಾಣೆ ವ್ಯಾಪ್ತಿಯ ಕಾಡುಬಿಸನಹಳ್ಳಿ ಮೂಲದ ರೋಹಿತ್ ಗೌಡ ಮತ್ತು ಸೋಮ ಎಂಬಿಬ್ಬರು ಕಳೆದ ಹಲವು ವರ್ಷಗಳಿಂದ ಪ್ರತ್ಯೇಕ ಗ್ಯಾಂಗ್ ಕಟ್ಟಿಕೊಂಡಿದ್ದು, ಒಬ್ಬರನ್ನೊಬ್ಬರು ಮುಗಿಸಲು ಸಂಚು ನಡೆಸುತ್ತಿದ್ದರು. ಎರಡು ಕಡೆಯೂ ಸಾಕಷ್ಟು ಕ್ರಿಮಿನಲ್ ಗಳ ಸಾಥ್ ಇದ್ದು, ಉಗ್ರಂ ಚಿತ್ರದ ರೀತಿ ಪರಸ್ಪರ ಕತ್ತಿ ಮಸೆಯುವ ಕೆಲಸ ಕಳೆದ ಕೆಲವು ಸಮಯದಿಂದ ನಡೆಯುತ್ತಲೇ ಇದೆ.
ಈ ನಡುವೆ ಕಳೆದ ಫೆಬ್ರವರಿಯಲ್ಲಿ ಮಂಗಳೂರು ಮೂಲದ ರೌಡಿಗಳ ತಂಡ ಬೆಂಗಳೂರಿನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದಿದ್ದರು. ಮಂಗಳೂರಿನ ವಿಶ್ವನಾಥ ಭಂಡಾರಿ ಮತ್ತು ಬೆಳ್ತಂಗಡಿ ಮೂಲದ ಕಿರಣ್ ಎಂಬವರಿದ್ದ ನಾಲ್ವರ ತಂಡ ಅದಾಗಲೇ ಬಿಡುಗಡೆಯಾಗಿದ್ದ ದರ್ಶನ್ ನಟನೆಯ ರಾಬರ್ಟ್ ಚಿತ್ರದ ನಿರ್ಮಾಪಕರೊಬ್ಬರಿಗೆ ಸ್ಕೆಚ್ ಹಾಕಿ, ಪೊಲೀಸರಿಗೆ ಸಿಕ್ಕಿಬಿದ್ದಿತ್ತು. ಈ ನಾಲ್ವರನ್ನು ಪೊಲೀಸರು ಬೆಂಡೆತ್ತಿದಾಗ ಎರಡು ಗ್ಯಾಂಗ್ ನಡುವಿನ ದ್ವೇಷದ ಕತೆಯನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೆ, ಕೆಲವೇ ಸಮಯದಲ್ಲಿ ಗ್ಯಾಂಗ್ ವಾರ್ ಆಗುವ ಸಾಧ್ಯತೆಯನ್ನು ಹೇಳಿದ್ದರು. ನಾವು ರೌಡಿ ಒಂಟೆ ರೋಹಿತ್ ಕಡೆಯವರಾಗಿದ್ದು, ಸೋಮನನ್ನು ಮುಗಿಸಲು ಸುಪಾರಿ ಪಡೆದಿದ್ದ ವಿಚಾರವನ್ನೂ ಪೊಲೀಸರಲ್ಲಿ ಬಾಯಿ ಬಿಟ್ಟಿದ್ದರು.
ಒಂಟೆ ರೋಹಿತ ಮತ್ತು ಸೋಮನ ಬಗ್ಗೆ ಚೆನ್ನಾಗೇ ಗೊತ್ತಿದ್ದ ಬಾಗಲಗುಂಟೆ ಪೊಲೀಸರ ಸಹಾಯ ಪಡೆದು ಸಿಸಿಬಿ ತಂಡ ಇತ್ತೀಚೆಗೆ ಬಲೆ ಬೀಸಿತ್ತು. ಮಲ್ಲಸಂದ್ರದಿಂದ ಬೆಂಕಿ ಮುನೇಶ್ವರ ರಸ್ತೆಯಾಗಿ ರವೀಂದ್ರನಗರ ಗುಂಟೆಯತ್ತ ಸಾಗುವಲ್ಲಿ ಒಂಟೆ ರೋಹಿತನ ಗ್ಯಾಂಗ್ ಬೀಡುಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸೋಮ ಮತ್ತಾತನ ತಂಡ ಅಲ್ಲಿಂದ ಬರುವ ಬಗ್ಗೆ ಸುಳಿವು ಪಡೆದು ಕಾದು ಕುಳಿತಿದ್ದ ರೋಹಿತ್ ಅಂಡ್ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ರೋಹಿತ್ ಗ್ಯಾಂಗಿನಲ್ಲಿ ಕಾಡುಬಿಸನಹಳ್ಳಿ ರೋಹಿತ್, ಅಮರನಾಥ್, ಮುನಿರಾಜು, ವಿಘ್ನೇಶ್, ಕಾಂತರಾಜು, ಹರೀಶ್, ಪ್ರಶಾಂತ ಕುಮಾರ್, ಜಮೀರ್, ಚಂದನ್, ಗಂಗರಾಜು, ಮಂಜುನಾಥ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಒಂದು ಪಿಸ್ತೂಲ್, ಮೂರು ಜೀವಂತ ಗುಂಡುಗಳು, ಹತ್ತು ಮಚ್ಚುಗಳು, ಒಂದು ಫಾರ್ಚೂನರ್ ಕಾರು, ಮತ್ತೊಂದು ಜೀಪ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗ್ಯಾಂಗ್ ನಡುವೆ ವೈರತ್ವ ಏನಿತ್ತು ?
ರೋಹಿತ್ ಮತ್ತು ಸೋಮನ ಕಡೆಯವರ ನಡುವೆ ಕಳೆದ ಹಲವು ವರ್ಷಗಳಿಂದ ವೈರತ್ವ ಬೆಳೆದಿತ್ತು. ವೈರತ್ವಕ್ಕೆ ಉಪ್ಪು ಸುರಿದಿದ್ದು ಎರಡು ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ. 2018ರಲ್ಲಿ ರೋಹಿತನ ಅಣ್ಣ ದಿನೇಶ್ ಎಂಬಾತನನ್ನು ಸೋಮನ ಕಡೆಯವರು ಕಡಿದು ಕೊಲೆ ಮಾಡಿದ್ದರು. ಇದೇ ದ್ವೇಷದಲ್ಲಿ ರೋಹಿತ್ ಮತ್ತು ಗ್ಯಾಂಗಿನವರು ಸೇರಿ ಸೋಮನ ತಮ್ಮ ಮಂಜುನನ್ನು 2019ರಲ್ಲಿ ಕೊಲೆಗೈದಿದ್ದರು. ಆಬಳಿಕ ಎರಡೂ ಗುಂಪುಗಳ ನಡುವೆ ಭಾರೀ ಕತ್ತಿಕಾಳಗದ ವರಸೆ ನಡೆದಿತ್ತು. ಒಂದೋ ನೀನು, ಇಲ್ಲಾ ನಾನು ಎಂಬಂತೆ ಒಂಟೆ ರೋಹಿತ ಮತ್ತು ಸೋಮನ ಕಡೆಯವರು ಪರಸ್ಪರ ಹಲ್ಲು ಕಡಿಯುತ್ತಿದ್ದರು.
ಇದೇ ವೇಳೆ, ಮಂಗಳೂರು ಮೂಲದ ವಿಶ್ವನಾಥ್ ಭಂಡಾರಿ ಮತ್ತು ಕಿರಣ್ ಎಂಬಿಬ್ಬರು ರೋಹಿತನಿಗೆ ಪರಿಚಯ ಆಗಿದ್ದು, ಸೋಮನ ಕತೆ ಮುಗಿಸಲು ಸುಪಾರಿ ನೀಡಿದ್ದಾನೆ. ಸುಪಾರಿ ಪಡೆದು ಸ್ಕೆಚ್ ಹಾಕಿರುವಾಗಲೇ ನಾಲ್ವರ ತಂಡ, ಪೊಲೀಸರಿಗೆ ಸೆರೆಸಿಕ್ಕಿದ್ದು, ಎಲ್ಲವನ್ನೂ ಪೊಲೀಸರ ಮುಂದೆ ಹೇಳಿಕೊಂಡಿದ್ದರು. ಈ ಮೂಲಕ ಎರಡು ಗ್ಯಾಂಗ್ ಹೊಗೆಯಾಡುತ್ತಿದ್ದ ದ್ವೇಷ ಪೊಲೀಸರ ಕಿವಿ ಮುಟ್ಟಿತ್ತು. ಪೊಲೀಸರು ಅಲರ್ಟ್ ಆಗಿದ್ದಲ್ಲದೆ, ರೌಡಿ ತಂಡಗಳ ಹಿಂದೆ ಬಿದ್ದು ಆಗಿಯೇ ಹೋಗುತ್ತಿದ್ದ ರಕ್ತದೋಕುಳಿಯನ್ನು ಅಲ್ಲಿಂದಲ್ಲಿಗೆ ತಪ್ಪಿಸಿದ್ದಾರೆ.
12 rowdy sheeters have been arrested by CCB police in Bangalore. Also two Mangalore based rowdies Kiran and Vishwanath Bhandary also have been arrested for taking supari in killing Deadly Soma.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm