ಬ್ರೇಕಿಂಗ್ ನ್ಯೂಸ್
23-08-20 08:21 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಘಟನೆಯಿಂದ ಬೆಂಗಳೂರು ಜನರು ಇನ್ನು ಚೇತರಿಸಿಕೊಂಡಿಲ್ಲ. ಆಗಲೇ ಐಟಿಸಿಟಿಯಲ್ಲಿ ಮತ್ತೊಂದು ಗುಂಡಿನ ಸದ್ದು ಆರ್ಭಟಸಿದೆ. ಕೆ ಆರ್ ಪುರದಲ್ಲಿ ಉದ್ಯಮಿ ಆಟೋ ಬಾಬು ಮೇಲೆ ಶೂಟೌಟ್ ನಡೆದಿದೆ.
ರಿಯಲ್ಎಸ್ಟೇಟ್ ವಿಷಯದಲ್ಲಿ ಆಟೋ ಬಾಬು ಮೇಲೆ ಗುಂಡು ಹಾರಾಟ ನಡೆದಿದೆ ಎನ್ನಲಾಗ್ತಿದೆ. ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಆಟೋ ಬಾಬು ಅಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸುಹೇಲ್ ಮತ್ತು ಬಾಬು ಮಧ್ಯೆ ಗಲಾಟೆ ಆರಂಭವಾಗಿದೆ.
ನಿನ್ನೆ ಆಟೋ ಬಾಬು ಮೇಲೆ ಸುಹೇಲ್ ಹಾಗು ಹಲವು ಪುಂಡರು ಗುಂಡಿನ ದಾಳಿ ಮಾಡಿದ್ದಾರೆ. ಆಟೋ ಬಾಬು ಕಚೇರಿಯಲ್ಲೇ ಫೈರಿಂಗ್ ಮಾಡಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಿಯಲ್ ಎಸ್ಟೇಟ್ ದ್ವೇಶದ ಹಿನ್ನೆಲೆ ಬಂದೂಕಿನಿಂದ ದಾಳಿ ಮಾಡಿದ ಸುಹೇಲ್ ತಲೆ ಮರೆಸಿಕೊಂಡಿದ್ದಾನೆ.
ಸುಹೇಲ್ ಗೆ ಬಂದೂಕು ಹೇಗೆ ಬಂತು, ಯಾವ ಪಿಸ್ತೂಲ್ ಬಳಸಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಗಾಯಾಳು ಆಟೋ ಬಾಬುನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಬಾಬು, ಸಚಿವ ಬೈರತಿ ಬಸವರಾಜ್ ಆತ್ಮೀಯ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಗೆ ಸಂಬಂಧ ಪಟ್ಟ ಕೆಲವರನ್ನು ವಶಕ್ಕೆ ಪಡೆದು ಕೆ ಆರ್ ಪುರ ಪೊಲೀಸರು ವಿಚಾರಣೆ ಮಾಡ್ತಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm