ಬ್ರೇಕಿಂಗ್ ನ್ಯೂಸ್
12-04-21 04:36 pm Headline Karnataka News Network ಕ್ರೈಂ
ಹಾಸನ, ಎ.12: ಮಂಗಳೂರು- ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಇದೆಯೆಂದು ರೇವ್ ಪಾರ್ಟಿ ಮಾಡಲು ಹಾಸನಕ್ಕೆ ತೆರಳಿದ್ದ ನೂರಕ್ಕೂ ಹೆಚ್ಚು ಯುವಕರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆಲೂರು ಠಾಣೆ ವ್ಯಾಪ್ತಿಯ ಹೊಂಗರವಳ್ಳಿ ಗ್ರಾಮದ ಹೋಮ್ ಸ್ಟೇಯಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು 120ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಭಾನುವಾರ ಮುಂಜಾವಿಗೆ ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದು 50ಕ್ಕೂ ಹೆಚ್ಚು ಮಂದಿ ಪೊಲೀಸರನ್ನು ಜೊತೆಯಾಗಿಸಿ ಹಾಸನ ಎಸ್ಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ವಶಕ್ಕೆ ಪಡೆದ ನೂರಕ್ಕೂ ಹೆಚ್ಚು ಮಂದಿಯಲ್ಲಿ ಬಹುತೇಕರು ಮಂಗಳೂರು ಮತ್ತು ಬೆಂಗಳೂರು ಮೂಲದ ಯುವಕ- ಯುವತಿಯರು ಅನ್ನೋ ವಿಚಾರ ಬಯಲಾಗಿದೆ. ಅಲ್ಲದೆ, ಪಾರ್ಟಿಯಲ್ಲಿ ಮದ್ಯ, ಡ್ರಗ್ಸ್, ಗಾಂಜಾ ರೀತಿಯ ಮಾದಕ ದ್ರವ್ಯ ಸೇವಿಸಿದ್ದು ಪತ್ತೆಯಾಗಿದೆ.

ನೈಟ್ ಕರ್ಫ್ಯೂ ಇದ್ದ ಕಾರಣ ಮಂಗಳೂರು, ಬೆಂಗಳೂರಿನ ಯುವಕ- ಯುವತಿಯರು ಪಾರ್ಟಿಗೆಂದು ಸಕಲೇಶಪುರಕ್ಕೆ ಬಂದಿದ್ದರು. ತಾವು ಬಂದಿದ್ದ ವಾಹನಗಳಲ್ಲಿ ಎಮರ್ಜೆನ್ಸಿ ಸ್ಟಿಕ್ಟರ್ ಹಾಕ್ಕೊಂಡು ಪೊಲೀಸರ ಕಣ್ತಪ್ಪಿಸಿ ಬಂದಿದ್ದು ಪತ್ತೆಯಾಗಿದೆ. ರೇವ್ ಪಾರ್ಟಿ ಆಗುತ್ತಿದ್ದಲ್ಲಿಗೆ ಮದ್ಯ ಮತ್ತು ಡ್ರಗ್ಸ್ ಮಾತ್ರೆಗಳನ್ನು ಅಕ್ರಮವಾಗಿ ಪೂರೈಕೆ ಮಾಡಲಾಗಿತ್ತು. ದಾಳಿ ವೇಳೆ ಎಲ್ ಎಸ್ ಡಿ, ಎಂಡಿಎಂಎ ಮಾತ್ರೆಗಳು, ಗಾಂಜಾ ಪತ್ತೆಯಾಗಿದೆ. ಹೋಮ್ ಸ್ಟೇ ಆವರಣದಲ್ಲಿ ನಿಲ್ಲಿಸಲಾಗಿದ್ದ 50ರಷ್ಟು ಟೂ ವೀಲರ್ ಮತ್ತು 20ರಷ್ಟು ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವಕ- ಯುವತಿಯರ ಜೊತೆಗೆ ಹೋಮ್ ಸ್ಟೇ ಮಾಲಕ ಎನ್ನಲಾಗಿರುವ ಗಗನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಡಿಎಸ್ಪಿ ಬಿ.ಆರ್. ಗೋಪಿ ಮಾಹಿತಿ ನೀಡಿದ್ದು, ಸುಮಾರು 120 ಮಂದಿಯನ್ನು ನಾವು ವಶಕ್ಕೆ ಪಡೆದಿದ್ದೇವೆ. ಅವರ ಬ್ಲಡ್ ಸ್ಯಾಂಪಲನ್ನೂ ಪಡೆದಿದ್ದು, ಪರೀಕ್ಷೆಗೆ ಒಳಪಡಿಸಿದ್ದೇವೆ,. ಈ ಪೈಕಿ 30 ಶೇಕಡಾ ಮಂದಿ ಬೆಂಗಳೂರಿನವರಾದ್ರೆ, ಉಳಿದವರೆಲ್ಲ ಮಂಗಳೂರಿನ ಮಂದಿ. ಅವರೆಲ್ಲ ಉದ್ಯೋಗಸ್ಥರು. ವಿದ್ಯಾರ್ಥಿಗಳು ಅಲ್ಲ ಎಂದು ಹೇಳಿದ್ದಾರೆ.

ಆನ್ಲೈನ್ ಮೂಲಕವೇ ಪಾರ್ಟಿಗೆ ಬರೋದನ್ನು ಖಚಿತಪಡಿಸಿಕೊಳ್ಳುತ್ತಾರೆ. ಕೊನೆ ಕ್ಷಣದ ವರೆಗೂ ಎಲ್ಲಿ ಅನ್ನುವ ಬಗ್ಗೆ ಮಾಹಿತಿ ಕೊಡುವುದಿಲ್ಲ. ಆನ್ ಲೈನ್ ಮೂಲಕ ನಿಗೂಢವಾಗೇ ಹೋಮ್ ಸ್ಟೇಯಲ್ಲಿ ರೇವ್ ಪಾರ್ಟಿ ನಡೆಸುತ್ತಾರೆ. ನೈಟ್ ಕರ್ಫ್ಯೂ ಆಗಿರೋದ್ರಿಂದ ಮಂಗಳೂರು, ಬೆಂಗಳೂರಿನಲ್ಲಿ ಪಬ್, ಪಾರ್ಟಿ ಬಂದ್ ಆಗಿದ್ದರಿಂದ ಸಕಲೇಶಪುರಕ್ಕೆ ಬಂದಿದ್ದಾರೆ. ನಾರ್ಕೋಟಿಕ್ ಡ್ರಗ್ ಏಕ್ಟ್ ಪ್ರಕಾರ ಕೇಸು ದಾಖಲಿಸಿದ್ದೇವೆ ಎಂದು ಹಾಸನ ಎಸ್ಪಿ ಶ್ರೀನಿವಾಸ ಗೌಡ ತಿಳಿಸಿದ್ದಾರೆ.
Over 100 youths have been arrested by the Hassan police in which most of them are from Mangalore and Bangalore. The police have also seized drugs and liquor from the spot. The owner of the homestay has been arrested too.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm