ಬ್ರೇಕಿಂಗ್ ನ್ಯೂಸ್
12-04-21 04:36 pm Headline Karnataka News Network ಕ್ರೈಂ
ಹಾಸನ, ಎ.12: ಮಂಗಳೂರು- ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಇದೆಯೆಂದು ರೇವ್ ಪಾರ್ಟಿ ಮಾಡಲು ಹಾಸನಕ್ಕೆ ತೆರಳಿದ್ದ ನೂರಕ್ಕೂ ಹೆಚ್ಚು ಯುವಕರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆಲೂರು ಠಾಣೆ ವ್ಯಾಪ್ತಿಯ ಹೊಂಗರವಳ್ಳಿ ಗ್ರಾಮದ ಹೋಮ್ ಸ್ಟೇಯಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು 120ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಭಾನುವಾರ ಮುಂಜಾವಿಗೆ ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದು 50ಕ್ಕೂ ಹೆಚ್ಚು ಮಂದಿ ಪೊಲೀಸರನ್ನು ಜೊತೆಯಾಗಿಸಿ ಹಾಸನ ಎಸ್ಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ವಶಕ್ಕೆ ಪಡೆದ ನೂರಕ್ಕೂ ಹೆಚ್ಚು ಮಂದಿಯಲ್ಲಿ ಬಹುತೇಕರು ಮಂಗಳೂರು ಮತ್ತು ಬೆಂಗಳೂರು ಮೂಲದ ಯುವಕ- ಯುವತಿಯರು ಅನ್ನೋ ವಿಚಾರ ಬಯಲಾಗಿದೆ. ಅಲ್ಲದೆ, ಪಾರ್ಟಿಯಲ್ಲಿ ಮದ್ಯ, ಡ್ರಗ್ಸ್, ಗಾಂಜಾ ರೀತಿಯ ಮಾದಕ ದ್ರವ್ಯ ಸೇವಿಸಿದ್ದು ಪತ್ತೆಯಾಗಿದೆ.

ನೈಟ್ ಕರ್ಫ್ಯೂ ಇದ್ದ ಕಾರಣ ಮಂಗಳೂರು, ಬೆಂಗಳೂರಿನ ಯುವಕ- ಯುವತಿಯರು ಪಾರ್ಟಿಗೆಂದು ಸಕಲೇಶಪುರಕ್ಕೆ ಬಂದಿದ್ದರು. ತಾವು ಬಂದಿದ್ದ ವಾಹನಗಳಲ್ಲಿ ಎಮರ್ಜೆನ್ಸಿ ಸ್ಟಿಕ್ಟರ್ ಹಾಕ್ಕೊಂಡು ಪೊಲೀಸರ ಕಣ್ತಪ್ಪಿಸಿ ಬಂದಿದ್ದು ಪತ್ತೆಯಾಗಿದೆ. ರೇವ್ ಪಾರ್ಟಿ ಆಗುತ್ತಿದ್ದಲ್ಲಿಗೆ ಮದ್ಯ ಮತ್ತು ಡ್ರಗ್ಸ್ ಮಾತ್ರೆಗಳನ್ನು ಅಕ್ರಮವಾಗಿ ಪೂರೈಕೆ ಮಾಡಲಾಗಿತ್ತು. ದಾಳಿ ವೇಳೆ ಎಲ್ ಎಸ್ ಡಿ, ಎಂಡಿಎಂಎ ಮಾತ್ರೆಗಳು, ಗಾಂಜಾ ಪತ್ತೆಯಾಗಿದೆ. ಹೋಮ್ ಸ್ಟೇ ಆವರಣದಲ್ಲಿ ನಿಲ್ಲಿಸಲಾಗಿದ್ದ 50ರಷ್ಟು ಟೂ ವೀಲರ್ ಮತ್ತು 20ರಷ್ಟು ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವಕ- ಯುವತಿಯರ ಜೊತೆಗೆ ಹೋಮ್ ಸ್ಟೇ ಮಾಲಕ ಎನ್ನಲಾಗಿರುವ ಗಗನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಡಿಎಸ್ಪಿ ಬಿ.ಆರ್. ಗೋಪಿ ಮಾಹಿತಿ ನೀಡಿದ್ದು, ಸುಮಾರು 120 ಮಂದಿಯನ್ನು ನಾವು ವಶಕ್ಕೆ ಪಡೆದಿದ್ದೇವೆ. ಅವರ ಬ್ಲಡ್ ಸ್ಯಾಂಪಲನ್ನೂ ಪಡೆದಿದ್ದು, ಪರೀಕ್ಷೆಗೆ ಒಳಪಡಿಸಿದ್ದೇವೆ,. ಈ ಪೈಕಿ 30 ಶೇಕಡಾ ಮಂದಿ ಬೆಂಗಳೂರಿನವರಾದ್ರೆ, ಉಳಿದವರೆಲ್ಲ ಮಂಗಳೂರಿನ ಮಂದಿ. ಅವರೆಲ್ಲ ಉದ್ಯೋಗಸ್ಥರು. ವಿದ್ಯಾರ್ಥಿಗಳು ಅಲ್ಲ ಎಂದು ಹೇಳಿದ್ದಾರೆ.

ಆನ್ಲೈನ್ ಮೂಲಕವೇ ಪಾರ್ಟಿಗೆ ಬರೋದನ್ನು ಖಚಿತಪಡಿಸಿಕೊಳ್ಳುತ್ತಾರೆ. ಕೊನೆ ಕ್ಷಣದ ವರೆಗೂ ಎಲ್ಲಿ ಅನ್ನುವ ಬಗ್ಗೆ ಮಾಹಿತಿ ಕೊಡುವುದಿಲ್ಲ. ಆನ್ ಲೈನ್ ಮೂಲಕ ನಿಗೂಢವಾಗೇ ಹೋಮ್ ಸ್ಟೇಯಲ್ಲಿ ರೇವ್ ಪಾರ್ಟಿ ನಡೆಸುತ್ತಾರೆ. ನೈಟ್ ಕರ್ಫ್ಯೂ ಆಗಿರೋದ್ರಿಂದ ಮಂಗಳೂರು, ಬೆಂಗಳೂರಿನಲ್ಲಿ ಪಬ್, ಪಾರ್ಟಿ ಬಂದ್ ಆಗಿದ್ದರಿಂದ ಸಕಲೇಶಪುರಕ್ಕೆ ಬಂದಿದ್ದಾರೆ. ನಾರ್ಕೋಟಿಕ್ ಡ್ರಗ್ ಏಕ್ಟ್ ಪ್ರಕಾರ ಕೇಸು ದಾಖಲಿಸಿದ್ದೇವೆ ಎಂದು ಹಾಸನ ಎಸ್ಪಿ ಶ್ರೀನಿವಾಸ ಗೌಡ ತಿಳಿಸಿದ್ದಾರೆ.
Over 100 youths have been arrested by the Hassan police in which most of them are from Mangalore and Bangalore. The police have also seized drugs and liquor from the spot. The owner of the homestay has been arrested too.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am