ಬ್ರೇಕಿಂಗ್ ನ್ಯೂಸ್
13-04-21 12:25 pm Mangalore Correspondent ಕ್ರೈಂ
ಉಳ್ಳಾಲ, ಎ.13: ನಿನ್ನೆ ಬೆಳಗ್ಗೆ ಕುತ್ತಾರು ವಿಷ್ಣುಮೂರ್ತಿ ರಸ್ತೆಯಿಂದ ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಯೋರ್ವಳಿಗೆ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕನನ್ನು ಉಳ್ಳಾಲ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಿಲಾರು ನಿವಾಸಿ ಮಹಮ್ಮದ್ ಹ್ಯಾರಿಸ್ (27) ಎಂಬಾತನೇ ಬಂಧಿತ ಆರೋಪಿ. ನಿನ್ನೆ ಬೆಳಗ್ಗೆ ವಿಷ್ಣುಮೂರ್ತಿ ದೈವಸ್ಥಾನ ರಸ್ತೆಯಿಂದ ಕುತ್ತಾರು ಜಂಕ್ಷನ್ ಕಡೆಗೆ ನಡೆದುಕೊಂಡು ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಗೆ ಹ್ಯಾರಿಸ್ ಮೊಬೈಲ್ ಮಾತನಾಡುವ ಸೋಗಲ್ಲಿ ತನ್ನ ಗುಪ್ತಾಂಗವನ್ನು ತೋರಿಸಿದ್ದ. ಹೆದರಿದ ಯುವತಿಯು ಹತ್ತಿರದ ಟೈಲರ್ ಶಾಪ್ ಒಂದಕ್ಕೆ ನುಗ್ಗಿ ಸಹಾಯ ಯಾಚಿಸಿದ್ದಳು.

ಈ ವೇಳೆ ಗಲಿಬಿಲಿಗೊಂಡ ಹ್ಯಾರಿಸ್ ಸ್ಥಳದಿಂದ ಕಾಲ್ಕಿತ್ತಿದ್ದು ಅಲ್ಲಿಂದ ತೆರಳುತ್ತಿದ್ದ ಕಾರು ಚಾಲಕನೋರ್ವ ಆರೋಪಿಯ ವೀಡಿಯೋವನ್ನು ತನ್ನ ಮೊಬೈಲಲ್ಲಿ ಚಿತ್ರೀಕರಿಸಿದ್ದ. ಈ ಬಗ್ಗೆ ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ದೂರು ನೀಡಿದ್ದರು.
ಕೆಂಪು ಟೀ ಶರ್ಟ್, ಮಾಸ್ಕ್ , ಟೊಪ್ಪಿ ಹಾಕಿದ್ದ ಆರೋಪಿಯ ವೀಡಿಯೋ ಪೊಲೀಸರಿಗೆ ಲಭಿಸಿದ್ದು ಕೆಲವೇ ಗಂಟೆಗಳಲ್ಲಿ ಆರೋಪಿಯ ಪತ್ತೆಹಚ್ಚಿ ಹೆಡೆಮುರಿ ಕಟ್ಟಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಎ.ಸಿ.ಪಿ ರಂಜಿತ್ ಬಂಡಾರು ಮಾರ್ಗದರ್ಶನದಲ್ಲಿಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಹ್ಯಾರಿಸ್ ನನ್ನು ಬಂಧಿಸಿದೆ.
Read: ಕುತ್ತಾರು ; ಯುವತಿಗೆ ಗುಪ್ತಾಂಗ ತೋರಿಸಿ ಯುವಕನ ವಿಕೃತಿ ! ಉಳ್ಳಾಲ ಠಾಣೆಗೆ ದೂರು
A man who showed his private part to a teenage girl walking on the street has been arrested by Ullal police.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm