ಬ್ರೇಕಿಂಗ್ ನ್ಯೂಸ್
13-04-21 02:46 pm Headline Karnataka News Network ಕ್ರೈಂ
ನವದೆಹಲಿ, ಎ.13: ಮಹಿಳೆ ಮತ್ತು ಆಕೆಯ ಪತಿ ಜೊತೆಯಾಗಿ ಜನನಿಬಿಡ ರಸ್ತೆಯಲ್ಲಿ ನಡೆದು ಬರುತ್ತಿದ್ದರು. ಆದರೆ, ಅವನಿಗೆ ಅದೇನಾಯ್ತೋ ಏನೋ.. ದಿಢೀರ್ ಆಗಿ ಚಾಕು ಹೊರತೆಗೆದು ಆಕೆಯ ಮೇಲೆ ಯದ್ವಾತದ್ವಾ ಇರಿದಿದ್ದಾನೆ. ಸಾವಿರಾರು ಮಂದಿ ಓಡಾಡುವ ರಸ್ತೆಯಾಗಿದ್ದರಿಂದ ವಾಹನಗಳು ಅದೇ ರಸ್ತೆಯಲ್ಲಿ ಸರಣಿಯಂತೆ ಸಾಗುತ್ತಿದ್ದವು. ಅಕ್ಕಪಕ್ಕದ ಕಟ್ಟಡದಲ್ಲಿ ನಿಂತಿದ್ದ ಜನ ಇದನ್ನು ನೋಡುತ್ತಾ ವಿಡಿಯೋ ಮಾಡಿದ್ದರೇ ವಿನಾ ಯಾರು ಕೂಡ ತಡೆಯಲು ಬರಲಿಲ್ಲ. ಆರೋಪಿ ಇರಿದ ಬಳಿಕ ಏನೂ ಆಗದಂತೆ ನಡೆದು ಹೋಗಿದ್ದಾನೆ.

ಹೌದು.. ಈ ರೀತಿಯ ಭೀಭತ್ತ ಘಟನೆ ನಡೆದಿದ್ದು ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ನಗರದಲ್ಲಿ. ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ನಡೆದ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಶೇಷ ಅಂದ್ರೆ, ಯುವತಿ ರಸ್ತೆಗೆ ಬಿದ್ದು ಸತ್ತ ಬಳಿಕವೂ ಆರೋಪಿ 25 ಬಾರಿ ಚಾಕುವಿನಿಂದ ಯದ್ವಾತದ್ವಾ ಇರಿದಿದ್ದಾನೆ.

ಮೃತ ಯುವತಿಯನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದ ನೀಲು ಮೆಹ್ತಾ ಎಂದು ಗುರುತಿಸಲಾಗಿದೆ. ಆರೋಪಿ, ನೀಲುವಿನ ಪತಿಯನ್ನು ಹರೀಶ್ ಮೆಹ್ತಾ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಯಾರೇಜ್ ಬ್ಯೂರೋದಲ್ಲಿ ಉದ್ಯೋಗಿ ಆಗಿದ್ದ ಹರೀಶ್ ಮೆಹ್ತಾ ಎಂಟು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ. ಇಬ್ಬರೂ ಗುಜರಾತಿನ ರಾಜಕೋಟ್ ನಿವಾಸಿಗಳಾಗಿದ್ದು, ದೆಹಲಿಯ ಬುದ್ಧ್ ವಿಹಾರ್ ಫೇಸ್ ಒಂದರಲ್ಲಿ ಬಾಡಿಗೆ ಮನೆಯಲ್ಲಿದ್ದರು.
ಪತ್ನಿ ಬಗ್ಗೆ ಶಂಕೆ ಹೊಂದಿದ್ದ ಹರೀಶ್ ಮೆಹ್ತಾ ಈ ಕೃತ್ಯ ಮಾಡಿದ್ದಾನೆ ಎನ್ನಲಾಗುತ್ತಿದೆ. ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಡಿಯೋ ಭಾರೀ ವೈರಲ್ ಆಗಿದ್ದು ಪತಿಯೇ ಪತ್ನಿಯನ್ನು ಕೈಯಾರೆ ಭೀಭತ್ಸವಾಗಿ ಇರಿದು ಕೊಲ್ಲುವ ದೃಶ್ಯ ಮನಕಲಕುತ್ತಿದೆ.
A 26-year-old woman was stabbed to death by her husband, 40, at a crowded market place in Delhi's Rohini area on Saturday (April 10) on the suspicion of her having an affair with another person. The accused has been arrested by the Delhi Police.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm