ಬ್ರೇಕಿಂಗ್ ನ್ಯೂಸ್
13-04-21 02:46 pm Headline Karnataka News Network ಕ್ರೈಂ
ನವದೆಹಲಿ, ಎ.13: ಮಹಿಳೆ ಮತ್ತು ಆಕೆಯ ಪತಿ ಜೊತೆಯಾಗಿ ಜನನಿಬಿಡ ರಸ್ತೆಯಲ್ಲಿ ನಡೆದು ಬರುತ್ತಿದ್ದರು. ಆದರೆ, ಅವನಿಗೆ ಅದೇನಾಯ್ತೋ ಏನೋ.. ದಿಢೀರ್ ಆಗಿ ಚಾಕು ಹೊರತೆಗೆದು ಆಕೆಯ ಮೇಲೆ ಯದ್ವಾತದ್ವಾ ಇರಿದಿದ್ದಾನೆ. ಸಾವಿರಾರು ಮಂದಿ ಓಡಾಡುವ ರಸ್ತೆಯಾಗಿದ್ದರಿಂದ ವಾಹನಗಳು ಅದೇ ರಸ್ತೆಯಲ್ಲಿ ಸರಣಿಯಂತೆ ಸಾಗುತ್ತಿದ್ದವು. ಅಕ್ಕಪಕ್ಕದ ಕಟ್ಟಡದಲ್ಲಿ ನಿಂತಿದ್ದ ಜನ ಇದನ್ನು ನೋಡುತ್ತಾ ವಿಡಿಯೋ ಮಾಡಿದ್ದರೇ ವಿನಾ ಯಾರು ಕೂಡ ತಡೆಯಲು ಬರಲಿಲ್ಲ. ಆರೋಪಿ ಇರಿದ ಬಳಿಕ ಏನೂ ಆಗದಂತೆ ನಡೆದು ಹೋಗಿದ್ದಾನೆ.

ಹೌದು.. ಈ ರೀತಿಯ ಭೀಭತ್ತ ಘಟನೆ ನಡೆದಿದ್ದು ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ನಗರದಲ್ಲಿ. ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ನಡೆದ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಶೇಷ ಅಂದ್ರೆ, ಯುವತಿ ರಸ್ತೆಗೆ ಬಿದ್ದು ಸತ್ತ ಬಳಿಕವೂ ಆರೋಪಿ 25 ಬಾರಿ ಚಾಕುವಿನಿಂದ ಯದ್ವಾತದ್ವಾ ಇರಿದಿದ್ದಾನೆ.

ಮೃತ ಯುವತಿಯನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದ ನೀಲು ಮೆಹ್ತಾ ಎಂದು ಗುರುತಿಸಲಾಗಿದೆ. ಆರೋಪಿ, ನೀಲುವಿನ ಪತಿಯನ್ನು ಹರೀಶ್ ಮೆಹ್ತಾ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಯಾರೇಜ್ ಬ್ಯೂರೋದಲ್ಲಿ ಉದ್ಯೋಗಿ ಆಗಿದ್ದ ಹರೀಶ್ ಮೆಹ್ತಾ ಎಂಟು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ. ಇಬ್ಬರೂ ಗುಜರಾತಿನ ರಾಜಕೋಟ್ ನಿವಾಸಿಗಳಾಗಿದ್ದು, ದೆಹಲಿಯ ಬುದ್ಧ್ ವಿಹಾರ್ ಫೇಸ್ ಒಂದರಲ್ಲಿ ಬಾಡಿಗೆ ಮನೆಯಲ್ಲಿದ್ದರು.
ಪತ್ನಿ ಬಗ್ಗೆ ಶಂಕೆ ಹೊಂದಿದ್ದ ಹರೀಶ್ ಮೆಹ್ತಾ ಈ ಕೃತ್ಯ ಮಾಡಿದ್ದಾನೆ ಎನ್ನಲಾಗುತ್ತಿದೆ. ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಡಿಯೋ ಭಾರೀ ವೈರಲ್ ಆಗಿದ್ದು ಪತಿಯೇ ಪತ್ನಿಯನ್ನು ಕೈಯಾರೆ ಭೀಭತ್ಸವಾಗಿ ಇರಿದು ಕೊಲ್ಲುವ ದೃಶ್ಯ ಮನಕಲಕುತ್ತಿದೆ.
A 26-year-old woman was stabbed to death by her husband, 40, at a crowded market place in Delhi's Rohini area on Saturday (April 10) on the suspicion of her having an affair with another person. The accused has been arrested by the Delhi Police.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm