ಬ್ರೇಕಿಂಗ್ ನ್ಯೂಸ್
13-04-21 02:46 pm Headline Karnataka News Network ಕ್ರೈಂ
ನವದೆಹಲಿ, ಎ.13: ಮಹಿಳೆ ಮತ್ತು ಆಕೆಯ ಪತಿ ಜೊತೆಯಾಗಿ ಜನನಿಬಿಡ ರಸ್ತೆಯಲ್ಲಿ ನಡೆದು ಬರುತ್ತಿದ್ದರು. ಆದರೆ, ಅವನಿಗೆ ಅದೇನಾಯ್ತೋ ಏನೋ.. ದಿಢೀರ್ ಆಗಿ ಚಾಕು ಹೊರತೆಗೆದು ಆಕೆಯ ಮೇಲೆ ಯದ್ವಾತದ್ವಾ ಇರಿದಿದ್ದಾನೆ. ಸಾವಿರಾರು ಮಂದಿ ಓಡಾಡುವ ರಸ್ತೆಯಾಗಿದ್ದರಿಂದ ವಾಹನಗಳು ಅದೇ ರಸ್ತೆಯಲ್ಲಿ ಸರಣಿಯಂತೆ ಸಾಗುತ್ತಿದ್ದವು. ಅಕ್ಕಪಕ್ಕದ ಕಟ್ಟಡದಲ್ಲಿ ನಿಂತಿದ್ದ ಜನ ಇದನ್ನು ನೋಡುತ್ತಾ ವಿಡಿಯೋ ಮಾಡಿದ್ದರೇ ವಿನಾ ಯಾರು ಕೂಡ ತಡೆಯಲು ಬರಲಿಲ್ಲ. ಆರೋಪಿ ಇರಿದ ಬಳಿಕ ಏನೂ ಆಗದಂತೆ ನಡೆದು ಹೋಗಿದ್ದಾನೆ.
ಹೌದು.. ಈ ರೀತಿಯ ಭೀಭತ್ತ ಘಟನೆ ನಡೆದಿದ್ದು ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ನಗರದಲ್ಲಿ. ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ನಡೆದ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಶೇಷ ಅಂದ್ರೆ, ಯುವತಿ ರಸ್ತೆಗೆ ಬಿದ್ದು ಸತ್ತ ಬಳಿಕವೂ ಆರೋಪಿ 25 ಬಾರಿ ಚಾಕುವಿನಿಂದ ಯದ್ವಾತದ್ವಾ ಇರಿದಿದ್ದಾನೆ.
ಮೃತ ಯುವತಿಯನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದ ನೀಲು ಮೆಹ್ತಾ ಎಂದು ಗುರುತಿಸಲಾಗಿದೆ. ಆರೋಪಿ, ನೀಲುವಿನ ಪತಿಯನ್ನು ಹರೀಶ್ ಮೆಹ್ತಾ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಯಾರೇಜ್ ಬ್ಯೂರೋದಲ್ಲಿ ಉದ್ಯೋಗಿ ಆಗಿದ್ದ ಹರೀಶ್ ಮೆಹ್ತಾ ಎಂಟು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ. ಇಬ್ಬರೂ ಗುಜರಾತಿನ ರಾಜಕೋಟ್ ನಿವಾಸಿಗಳಾಗಿದ್ದು, ದೆಹಲಿಯ ಬುದ್ಧ್ ವಿಹಾರ್ ಫೇಸ್ ಒಂದರಲ್ಲಿ ಬಾಡಿಗೆ ಮನೆಯಲ್ಲಿದ್ದರು.
ಪತ್ನಿ ಬಗ್ಗೆ ಶಂಕೆ ಹೊಂದಿದ್ದ ಹರೀಶ್ ಮೆಹ್ತಾ ಈ ಕೃತ್ಯ ಮಾಡಿದ್ದಾನೆ ಎನ್ನಲಾಗುತ್ತಿದೆ. ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಡಿಯೋ ಭಾರೀ ವೈರಲ್ ಆಗಿದ್ದು ಪತಿಯೇ ಪತ್ನಿಯನ್ನು ಕೈಯಾರೆ ಭೀಭತ್ಸವಾಗಿ ಇರಿದು ಕೊಲ್ಲುವ ದೃಶ್ಯ ಮನಕಲಕುತ್ತಿದೆ.
A 26-year-old woman was stabbed to death by her husband, 40, at a crowded market place in Delhi's Rohini area on Saturday (April 10) on the suspicion of her having an affair with another person. The accused has been arrested by the Delhi Police.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm