ಬೆಂಗಳೂರಿನಲ್ಲಿ ಪೊಲೀಸರ ಫೈರಿಂಗ್ ; ಡಬಲ್ ಮರ್ಡರ್ ಆರೋಪಿ ಕಾಲಿಗೆ ಗುಂಡು

14-04-21 11:12 am       Headline Karnataka News Network   ಕ್ರೈಂ

ಪುಟ್ಟೇನಹಳ್ಳಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಪ್ರಕರಣದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. 

ಬೆಂಗಳೂರು, ಏ. 14: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಪುಟ್ಟೇನಹಳ್ಳಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಪ್ರಕರಣದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. 

ಆರೋಪಿ ಮಂಜುನಾಥ್ ಅಲಿಯಾಸ್ ಅಂಬಾರಿ ಕೊಲೆ ಅರೋಪಿಯಾಗಿದ್ದು, ಮನೆಯಲ್ಲಿದ್ದ ಹಣ ಮೊಬೈಲ್, ಚಿನ್ನಾಭರಣವನ್ನು ದೋಚುವ ಸಲುವಾಗಿ ಎರಡು ಕೊಲೆ ಮಾಡಿದ್ದ. ಆತನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ.

ಏಪ್ರಿಲ್ 7ರಂದು ಜೆಪಿ ನಗರದ 7ನೇ ಹಂತದಲ್ಲಿನ ಮನೆಯಲ್ಲಿ ಮಮತಾ ಬಸು ಮತ್ತು ದೇವ ಬ್ರಥಾ ಅವರ ಮೇಲೆ ಹಲ್ಲೆ ನಡೆಸಿದ್ದ ಮಂಜುನಾಥ್ ಅವರಿಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ್ದ.

ಲಬಂಧಿತ ಆರೋಪಿ ಮಂಜುನಾಥ್ ಮೇಲೆ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ 10ಕ್ಕೂ ಹೆಚ್ಚು ಕೇಸ್​ಗಳಿವೆ. ಆರೋಪಿ ಮಂಜುನಾಥ್​ನನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಇನ್​ಸ್ಪೆಕ್ಟರ್ ಕಿಶೋರ್ ಆತನ ಮೇಲೆ ಗುಂಡು ಹಾರಿಸಿ ಬಂಧನ ಮಾಡಿದ್ದಾರೆ.

The Bengaluru police on Wednesday morning opened fire at a Double murder case accused to nab him after he allegedly attacked police.