ಬ್ರೇಕಿಂಗ್ ನ್ಯೂಸ್
16-04-21 11:50 am Headline Karnataka News Network ಕ್ರೈಂ
ಬೆಂಗಳೂರು,ಎ.16 : ಮಾದಕ ದ್ರವ್ಯ ಜಾಲದಲ್ಲಿ ಸಕ್ರಿಯರಾಗಿದ್ದ ನೈಜೀರಿಯಾ ಮೂಲದ ನಾಲ್ವರನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ಬಾಗಲೂರಿನಲ್ಲಿ ಬಂಧಿಸಿದ್ದಾರೆ. ಅಜಾ ಫ್ರಾನ್ಸಿಸ್, ಚಾರ್ಲೀಸ್ ಚೀಮ, ಮಲಂಗ ಪಾಷಾ, ಜಸೀರ್ ಖಾನ್ಡೆ ಎಂಬ ನಾಲ್ವರನ್ನು ಬಂಧನಕ್ಕೆ ಒಳಪಡಿಸಲಾಗಿದ್ದು, ಬಾಗಲೂರು ಪ್ರದೇಶವನ್ನು ಅಡ್ಡ ಮಾಡಿಕೊಂಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದಾಗ ತಪ್ಪಿತಸ್ಥರು ಸಿಕ್ಕಿಹಾಕಿಕೊಂಡಿದ್ದಾರೆ.
ಬಂಧಿತರಿಂದ 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. 200 ಎಕ್ಸ್ಟಸಿ ಮಾತ್ರೆ, 153 ಗ್ರಾಂ ಎಂಡಿಎಂಎಂ, 5 ಮೊಬೈಲ್, 2 ಬೈಕ್, ನಗದು, ಮಾರಕಾಸ್ತ್ರಗಳನ್ನೂ ವಶಕ್ಕೆ ಪಡೆಯಲಾಗಿದ್ದು ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾದಕ ದ್ರವ್ಯ ತಡೆ ಬಗ್ಗೆ ಇತ್ತೀಚೆಗಷ್ಟೇ ಮಾತನಾಡಿದ್ದ ಅಬಕಾರಿ ಸಚಿವ ಗೋಪಾಲಯ್ಯ, ಸಿಎಲ್ 7, ಎಂಎಸ್ಐಎಲ್ ಪರವಾನಗಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. 60 ಜೀಪ್ ಖರೀದಿಸಲು ಅನುಮತಿ ಸಿಕ್ಕಿದೆ. 300 ಬೈಕ್, ಡಿಸಿ ಕಚೇರಿಗೆ 4 ರಿವಾಲ್ವರ್ ನೀಡಲು ನಿರ್ಧಾರ ಮಾಡಲಾಗಿದೆ. ಗಾಂಜಾ, ಮಾದಕ ದ್ರವ್ಯ ನಿಯಂತ್ರಣಕ್ಕೆ ಪ್ರತ್ಯೇಕ ಡಿಸಿ ನೇಮಕಾತಿ ಮಾಡಲಾಗುತ್ತದೆ. ಈ ಮೂಲಕ ಮಾದಕ ವಸ್ತುಗಳ ಸಾಗಣೆ ತಡೆಯಲು ಚಿಂತನೆ ನಡೆಸಲಾಗಿದೆ. ಈ ಕುರಿತಂತೆ ಕಾನೂನು ಮತ್ತು ಗೃಹ ಸಚಿವರ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.
ಅಬಕಾರಿ ಇಲಾಖೆ ಆದಾಯದ ಬಗ್ಗೆ ಮಾತನಾಡಿ, ಸರ್ಕಾರ ಕೊಟ್ಟ ಟಾರ್ಗೆಟ್ ಅನ್ನು ಈಗಾಗಲೇ ಮುಟ್ಟಿದ್ದೇವೆ. ಇನ್ನು, ತಿಂಗಳ ಅಂತ್ಯದಲ್ಲಿ ಇನ್ನೂ ಹೆಚ್ಚಿನ ಆದಾಯ ಬರುವ ಸಾಧ್ಯತೆ ಇದೆ. 2020-21ನೇ ಸಾಲಿನ 22700 ಕೋಟಿ ಆದಾಯ ತಲುಪಿದ್ದು, ಮಾರ್ಚ್ 31ರವರೆಗೆ 200 ಕೋಟಿ ಹೆಚ್ಚುವರಿಯಾಗಿ ಸಂಗ್ರಹವಾಗಲಿದೆ ಎಂದು ವಿಧಾನಸೌಧದಲ್ಲಿ ವಿವರಿಸಿದ್ದರು.
Karnataka's Central Crime Branch (CCB) on Thursday arrested four people, including two Nigerian nationals and seized drugs from their possession.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm