ಬ್ರೇಕಿಂಗ್ ನ್ಯೂಸ್
17-04-21 10:49 am Mangalore Correspondent ಕ್ರೈಂ
ಪಡುಬಿದ್ರೆ, ಎ.17 : ಇಪ್ಪತ್ತು ವರ್ಷಗಳ ಹಿಂದೆ ನಡೆದಿದ್ದ ಮಜೂರು ಕರಂದಾಡಿ ಗುತ್ತು ಜಯರಾಮ ಶೆಟ್ಟಿ ಎಂಬವರ ಕೊಲೆ ಪ್ರಕರಣದಲ್ಲಿ ಆಪಾದಿತನಾಗಿ ತಲೆಮರೆಸಿಕೊಂಡಿದ್ದ ಆರೋಪಿ ಬಡಾ ಎರ್ಮಾಳ್ ನಿವಾಸಿ ಇಲಿಯಾಸ್ ಯಾನೆ ಮಹಮ್ಮದ್ ಹಸನ್ (45) ಎಂಬಾತನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಜಯರಾಮ ಶೆಟ್ಟಿ ಅವರನ್ನು 2000ನೇ ಇಸವಿಯಲ್ಲಿ ಅವರ ಸಹೋದರ ಉದಯ ಶೆಟ್ಟಿ ಯಾನೆ ದಾಡೆ ಉದಯ ಎಂಬಾತ ಆಸ್ತಿ ತಕರಾರಿನ ಹಿನ್ನೆಲೆಯಲ್ಲಿ ಸುನಿಲ್ ಶೆಟ್ಟಿ, ಇಲಿಯಾಸ್ ಯಾನೆ ಮಹಮ್ಮದ್ ಹಸನ್ ಮತ್ತು ಅಬೂಬಕ್ಕರ್ ಸಿದ್ದಿಕ್ ಎಂಬವರ ಜೊತೆ ಸೇರಿಕೊಂಡು ಕೊಲೆ ಮಾಡಿದ್ದ.
ಆರೋಪಿಗಳ ಬಂಧನವಾಗಿ ಪ್ರಕರಣದ ವಿಚಾರಣೆ ಕೋರ್ಟಿನಲ್ಲಿ ಪ್ರಗತಿಯಲ್ಲಿದ್ದಾಗ, 2007ರಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಬಳಿಕ ಮಹಮ್ಮದ್ ರಫೀಕ್ ಎಂಬ ಹೆಸರಲ್ಲಿ ನಕಲಿ ಪಾಸ್ಪೋರ್ಟ್ ಮಾಡಿಸಿಕೊಂಡು ಸೌದಿ ಅರೇಬಿಯಾಕ್ಕೆ ಪರಾರಿ ಆಗಿದ್ದ. ಇತ್ತೀಚೆಗೆ ಈತ ಊರಿಗೆ ಬಂದಿರುವ ಮಾಹಿತಿ ಪಡೆದ ಕಾಪು ಠಾಣೆ ವಾರಂಟ್ ಸಿಬ್ಬಂದಿ ಹೆಡ್ ಕಾನ್ ಸ್ಟೇಬಲ್ಗಳಾದ ಸುಧಾಕರ ಭಂಡಾರಿ, ರಫೀಕ್, ರವೀಂದ್ರ, ಪಿ.ಸಿ. ಸಂದೇಶ್ ಭಂಡಾರಿ ಆರೋಪಿಯನ್ನು ಬಂಧಿಸಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
Police of Kaup station arrested a warrant accused who was absconding since 2008. Ilyas alias Mohammed Hassan alias Mohammed Rafiq is the accused who was arrested by the warrant personnel of Kaup police station.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm